Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ



ಬಜಪೆ:ಬಾಳ ಗ್ರಾಮ ಪಂಚಾಯತ್ ನ ಗ್ರಾಮ‌ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮಕ್ಕಳ ಬೇಸಿಗೆ ಶಿಬಿರವು  ಮೇ.19 ರಂದು ಆರಂಭಗೊಂಡಿದ್ದು, ಮೇ 26 ರ  ಶುಕ್ರವಾರದ ತನಕ ನಡೆಯಿತು.ಶುಕ್ರವಾರದಂದು  ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು   ಬಾಳ ಗ್ರಾಮ ಪಂಚಾಯತ್ ನ ಸಭಾಭವನದಲ್ಲಿ ನಡೆಯಿತು. ಶಿಬಿರದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹುಲಿ ಗಮ್ಮ ವಹಿಸಿದ್ದರು. ಶಿಬಿರದಲ್ಲಿ ಭಾಗವಹಿಸಿದ  ಮಕ್ಕಳಿಗೆ ಪ್ರಮಾಣ ಪತ್ರ, ಬಹುಮಾನ ಹಾಗೂ ಸುಗಮಗಾರರಿಗೆ ಪ್ರಶಂಸಾ ಪತ್ರ ವಿತರಿಸಲಾಯಿತು.  ಪಂಚಾಯತ್ ಉಪಾಧ್ಯಕ್ಷ ಶಂಕರ ಜೋಗಿ, ಪಂಚಾಯತ್ ಸದಸ್ಯ ರಾದ ಶ್ರೀ ಪದ್ಮನಾಭ ಸಾಲ್ಯಾನ್ ಮತ್ತು ಶ್ರೀ ಮತಿ ಲಕ್ಷ್ಮಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಮತಿ ದೀಪಿಕಾ ,ಜಲಜೀವನ್ ಮಿಷನ್ ನ  ಸುಕೇತ ,ಸುದರ್ಶನ್  ಆಶಾ ಕಾರ್ಯಕರ್ತೆ ಶ್ರೀಮತಿ ಶೈಲಜಾ ಗ್ರಾಂಥಾಲಯ ಮೇಲ್ವಿಚಾರಕಿ ಶ್ರೀಮತಿ ಸುಮಲತಾ ಪಂಚಾಯತ್ ಸಿಬ್ಬಂದಿ ಗಳು ಉಪಸ್ಥಿತರಿದ್ದರು. ಪಂಚಾಯತ್ ಕಾರ್ಯದರ್ಶಿ ಲೋಕನಾಥ ಭಂಡಾರಿ ಕಾರ್ಯಕ್ರಮ ವನ್ನು ನಿರೂಪಿಸಿ ವಂದರ್ನಾಪನೆ ಗೈದರು.