-->

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಉತ್ಕ್ರಷ್ಟ ಭಾರತೀಯ ಪರಂಪರೆಯ ನಡವಳಿಕೆ ಸಮಾಜವನ್ನು ಒಗ್ಗೂಡಿಸುತ್ತದೆ - ಡಾ.ಭರತ್ ಶೆಟ್ಟಿ

ಉತ್ಕ್ರಷ್ಟ ಭಾರತೀಯ ಪರಂಪರೆಯ ನಡವಳಿಕೆ ಸಮಾಜವನ್ನು ಒಗ್ಗೂಡಿಸುತ್ತದೆ - ಡಾ.ಭರತ್ ಶೆಟ್ಟಿ

ಹಿಂದೂ ಸಂಸ್ಕೃತಿ ಸಂಸ್ಕಾರಗಳನ್ನು ಎಳೆಯರ ಮನಸ್ಸಿನಲ್ಲಿ ಮೂಡುವಂತೆ ಪ್ರೆರೇಪಿಸುವ ಶಿಕ್ಷಣ ಬಾಲಗೋಕುಲ ಕೇಂದ್ರಗಳಲ್ಲಿ ಸಿಗುತ್ತದೆ. ಉತ್ಕ್ರಷ್ಟ ಭಾರತೀಯ ಪರಂಪರೆಯ ನಡವಳಿಕೆ ಸಮಾಜವನ್ನು ಒಗ್ಗೂಡಿಸುತ್ತದೆ. ಒಡೆದು ಆಳುವ ನೀತಿಗೆ ನಾವು ಚದುರಬಾರದು. ಸಾಂಘಿಕ ಶಕ್ತಿಯಾಗಿ ಪ್ರೀತಿ ಗೌರವಗಳ ಅಮೃತ ಭಾವನೆಯಿಂದ ಸಮಾಜದಲ್ಲಿ ಶಕ್ತಿಶಾಲಿ ಹಿಂದೂ ಸಮಾಜವಾಗಬೇಕು ಎಂದು ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಅವರು ಹೇಳಿದರು.ಅವರು  ಶ್ರೀ ರಾಮ ಯುವಕ ಸಂಘ ಪ್ರಾಯೋಜಿಸಿದ ಶ್ರೀ ರಾಮ ಬಾಲಗೋಕುಲದ ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಪುಸ್ತಕಗಳನ್ನುವಿತರಿಸಿ  ಮಾತನಾಡಿದರು.
ಜಾತಿ ವೈಶಮ್ಯಗಳು ವಿನಾಶಕಾರಿ ಪ್ರವೃತ್ತಿಯಾಗುತ್ತದೆ. ಸದೃಡ ಹಿಂದೂ ಸಮಾಜ ನಿರ್ಮಾಣಕ್ಕೆ ಎಲ್ಲರೂ ಒಂದಾಗಬೇಕು ದ್ವೇಷ ಏನನ್ನೂ ಸಾಧಿಸದು ಪ್ರೀತಿ ಸಾಧನೆಯ ಪ್ರತೀಕ ನಾವೆಲ್ಲಾ ಪ್ರೀತಿಯಿಂದ ಬಾಳೋಣ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತ ಸರಕಾರದ ನಾಗರಿಕ ವಿಮಾನಯಾನ ಇಲಾಖೆಯ ಉಪ ನಿರ್ದೇಶಕ ಜಗದೀಶ್ ಬಳ್ಳಾಲಬೈಲ್ ಶುಭ ಹಾರೈಸಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಜನಾರ್ದನ ಗೌಡ ಮುಚ್ಚೂರು ಪ್ರಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಸಂಘದ ಅಧ್ಯಕ್ಷ ಆನಂದ್. ಮಿಜಾರ್ ಶಕ್ತಿಕೇಂದ್ರದ ಅಧ್ಯಕ್ಷ ಗೋಪಾಲ್ ಕಂದಲಬೆಟ್ಟು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಸದಸ್ಯ ರೂಪೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ಬಾಲಗೋಕುಲದ ಮಾತಾಜಿಯವರಾದ ಸರಿತಾ ಮಾಲತಿ, ಧನ್ಯ, ಪೂಜಾ, ಚಂದ್ರಿಕಾ, ದಿವ್ಯಾ ನಿರ್ವಹಣೆಗೈದರು.116 ಮಂದಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಲಾಯಿತು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ