-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ

ನಾಳೆ  (ಮೇ.21)ತೋಕೂರಿನಲ್ಲಿ ಬ್ರಹ್ಮಕುಂಭಾಭಿಷೇಕ

ನಾಳೆ (ಮೇ.21)ತೋಕೂರಿನಲ್ಲಿ ಬ್ರಹ್ಮಕುಂಭಾಭಿಷೇಕ

ಕಿನ್ನಿಗೋಳಿ :  ಜೀರ್ಣೋದ್ಧಾರಗೊಂಡಿರುವ  ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಳೆ (ಮೇ 21)ರಂದು ಬ್ರಹ್ಮಕುಂಭಾಭಿಷೇಕ ಜರಗಲಿದೆ.
ದೇವಳದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 5-45ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕುಂಭಾಭಿಷೇಕ ನಡೆಯಲಿದೆ. ಕಲಾಶಾಭಿಷೇಕ, ಪ್ರಸನ್ನಪೂಜೆ, ನ್ಯಾಸಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆದು, ಹಗಲು ರಥೋತ್ಸವ, ಪಲ್ಲಪೂಜೆ, ಪ್ರಸನ್ನಪೂಜೆ, ಮಹಾಅನ್ನಂತರ್ಪಣೆ, ಉತ್ಸವಬಲಿ, ಶ್ರೀ ಭೂತಬಲಿ, ಶಯನೋತ್ಸವ, ಕವಾಟ ಬಂಧನ ನಡೆಯಲಿದೆ. ಸಂಜೆ ಧಾರ್ಮಿಕ ಸಭೆ ಜರಗಲಿದೆ. ವಿವಿಧ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಗೊಳ್ಳಲಿದೆ. ಅಂದಾಜು ೫೦ ಸಾವಿರ ಮಂದಿ ಭಾಗವಹಿಸುವುದರಿಂದ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರಿದಾಸ್ ಭಟ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಂತೋಷ್‌ಕುಮಾರ್ ಹೆಗ್ಡೆ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630

Advertise in articles 1

advertising articles 2

ಸುದ್ದಿ ,ಕಾರ್ಯಕ್ರಮಗಳ ನೇರಪ್ರಸಾರ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630

ಸುದ್ದಿಗಳಿದ್ದರೆ Chigurunewss@gmail.com ಗೆ ಕಳಿಸಿರಿ