ಮಂಗಳೂರು ನಗರ ಉತ್ತರ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ
Monday, June 5, 2023
ಕಾವೂರು:ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲದ ಪ್ರಥಮ ವಿಶೇಷ ಕಾರ್ಯಕಾರಿಣಿ ಸಭೆ ಮತ್ತು ಅವಲೋಕನಾ ಸಭೆಯು ಕಾವೂರು ವ್ಯವಸಾಯ ಸಹಕಾರಿ ಸಭಾಭವನದಲ್ಲಿ ನಡೆಯಿತು.
ಮತದಾರರಿಗೂ ಮತ್ತು ಚುನಾವಣೆಯಲ್ಲಿ ರಾತ್ರಿ ಹಗಲು ಅನ್ನದೇ ಕೆಲಸ ಮಾಡಿದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಶಾಸಕರಾದ ಡಾ. ಭರತ್ ಶೆಟ್ಟಿಯವರು ಧನ್ಯವಾದ ಅರ್ಪಿಸಿದರು.