-->

ತೋಕೂರು ದೇವಳದಲ್ಲಿ ಊರ ಪರವೂರ ಭಕ್ತರ ಹಾಗೂ ಗ್ರಾಮಸ್ಥರ ವಿಶೇಷ ಸಭೆ

ತೋಕೂರು ದೇವಳದಲ್ಲಿ ಊರ ಪರವೂರ ಭಕ್ತರ ಹಾಗೂ ಗ್ರಾಮಸ್ಥರ ವಿಶೇಷ ಸಭೆ

ಹಳೆಯಂಗಡಿ : ತೋಕೂರಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ದೇವಳದ ಸಮಗ್ರ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು  ಇತ್ತೀಚಿಗೆ ಭಕ್ತರ  ಸಹಕಾರದೊಂದಿಗೆ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.ಆ ಪ್ರಯುಕ್ತ  ದೇವಸ್ಥಾನದ  ಸಭಾಂಗಣದಲ್ಲಿ ಊರ ಪರವೂರ ಭಕ್ತರ ಹಾಗೂ ಗ್ರಾಮಸ್ಥರ ವಿಶೇಷ ಸಭೆಯು  ನಡೆಯಿತು.

ಜಾಹೀರಾತು:

ಸಭೆಯಲ್ಲಿ  ಸಮಗ್ರ ಜೀರ್ಣೋದ್ಧಾರದ ಲೆಕ್ಕಪತ್ರ ಹಾಗೂ . ಮುಂದಿನ ಕಾರ್ಯಯೋಜನೆಗಳ ಬಗ್ಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರಿದಾಸ್ ಭಟ್ ರವರು ಮಾಹಿತಿ ನೀಡಿ ಮುಂದಿನ ದಿನಗಳಲ್ಲಿ ದೇವಸ್ಥಾನದ ಉಳಿದ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣ ಗೊಳಿಸಲು ಭಕ್ತರ ಹಾಗೂ ದಾನಿಗಳ ಸಹಕಾರ ಅತ್ಯಗತ್ಯ ಎಂದರು.
ಸಭೆಯಲ್ಲಿ ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷ ಮೋಹನದಾಸ್, ಬೆಂಗಳೂರು ಸಮಿತಿಯ ಕಾರ್ಯದರ್ಶಿ ಹರಿಪ್ರಸಾದ್ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807