Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ತೋಕೂರಿನಲ್ಲಿ ಸಂಭ್ರಮದ ಷಷ್ಠಿ ಮಹೋತ್ಸವ

ಹಳೆಯಂಗಡಿ ಸಮೀಪದ ಪ್ರಸಿದ್ಧ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವವು ಇಂದು 
ವಿಜೃಂಭಣೆಯಿಂದ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ ಹಾಗೂ ಅರ್ಚಕ ಮಧುಸೂದನ ಆಚಾರ್ಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು, ಮಹಾ ಪೂಜೆ, ಉತ್ಸವ ಬಲಿ, ಹಗಲು ರಥೋತ್ಸವ, ಪಲ್ಲ ಪೂಜೆ, ಮಹಾಅನ್ನ ಸಂತರ್ಪಣೆ ನಡೆಯಿತು.

ರಾತ್ರಿ ಕ್ಷೇತ್ರದಲ್ಲಿ ಶ್ರೀ ದೇವರ ಬಯನ ಬಲಿ, ಶ್ರೀ ದೇವರ ಶಯನೋತ್ಸವ, ಕವಾಟ ಬಂಧನ ನಡೆಯಿತು.