ಕಟೀಲು:ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ , ಚಿತ್ರ ನಿರ್ದೇಶಕ, ಸಂತೋಷ್ ಆನಂದ್ರಾಮ ಹಾಗೂ ನಟ ಯುವ ರಾಜ್ ಕುಮಾರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಾರ್ಚ್ 29ರಂದು ಬಿಡುಗಡೆಯಾಗಲಿರುವ ಯುವ ಚಿತ್ರದ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ವನ್ನು ಚಿತ್ರತಂಡದ ಪ್ರಮುಖರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.