-->

ಕಟೀಲು ಉಳ್ಳಂಜೆ ಕ್ರಾಸ್ ಬಳಿ ಶಿಬರೂರು ನೂತನ ದ್ವಾರಕ್ಕೆ ಶಿಲಾನ್ಯಾಸ

ಕಟೀಲು ಉಳ್ಳಂಜೆ ಕ್ರಾಸ್ ಬಳಿ ಶಿಬರೂರು ನೂತನ ದ್ವಾರಕ್ಕೆ ಶಿಲಾನ್ಯಾಸ

ಕಟೀಲು : ಕಟೀಲು ಉಲ್ಲಂಜೆ ಕ್ರಾಸ್ ಬಳಿ ಸುಧಾಕರ ಶೆಟ್ಟಿ ಮೊಗ್ರೋಡಿ ಕನ್ ಸ್ಟ್ರಕ್ಷನ್ ಸೇವಾರೂಪವಾಗಿ ನಿರ್ಮಿಸುತ್ತಿರುವ ನೂತನ ಸ್ವಾಗತ ಗೋಪುರದ ಶಿಲಾನ್ಯಾಸ ಕಾರ್ಯಕ್ರಮ ಇಂದು (ಮಂಗಳವಾರ) ಬೆಳಗ್ಗೆ ನೆರವೇರಿತು.
ಧಾರ್ಮಿಕ ವಿಧಿ ವಿಧಾನವನ್ನು ಶಿಬರೂರು ವೇದವ್ಯಾಸ ತಂತ್ರಿಯವರು ನೆರವೇರಿಸಿದರು.  "ಮೊಗ್ರೋಡಿ ಕನ್ ಸ್ಟ್ರಕ್ಷನ್ ಸಂಸ್ಥೆಯು ಕಟೀಲು ಶ್ರೀದೇವಿಯ ಉತ್ಸವ ಸಂದರ್ಭದಲ್ಲಿ ಕೊಡಮಣಿತ್ತಾಯ ದೈವದ ಭೇಟಿಗೆ ತೆರಳುವ ದಾರಿಯಲ್ಲಿ ಭವ್ಯವಾದ ಸ್ವಾಗತ ಗೋಪುರ ನಿರ್ಮಿಸಲು ಮುಂದಾಗಿದೆ. ಸೇವಾಕರ್ತರ ಇಚ್ಛೆಯಂತೆ ಏಪ್ರಿಲ್ 20ರ ವಾರ್ಷಿಕ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಗೋಪುರ ಲೋಕಾರ್ಪಣೆಗೊಳ್ಳಲಿದೆ .
ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಶ್ರೀಹರಿನಾರಾಯಣ ದಾಸ ಅಸ್ರಣ್ಣರು ಸೇವಾಕರ್ತರು ಹಾಗೂ ಇಂಜಿನಿಯರ್ ಗಳಿಗೆ ಪೂಜಾ ಪ್ರಸಾದ ವಿತರಿಸಿ ಶುಭಾಶೀರ್ವಾದಗೈದರು.
ಈ ಸಂದರ್ಭ  ಶಿಬರೂರು ಗುತ್ತಿನಾರ್ ಉಮೇಶ್ ಎನ್ ಶೆಟ್ಟಿ, ಪ್ರದ್ಯುಮ್ನ ರಾವ್ ಕೈಯೂರುಗುತ್ತು, ತುಕರಾಮ ಶೆಟ್ಟಿ ಪರ್ಲಬೈಲ್ ಗುತ್ತು, ಜಿತೇಂದ್ರ ಶೆಟ್ಟಿ ಕೋರ್ಯಾರು ಗುತ್ತು, ಸುಬ್ರಹ್ಮಣ್ಯ ಪ್ರಸಾದ್ ಕೋರ್ಯಾರು, ಮಧುಕರ ಅಮೀನ್,  ಚಂದ್ರಹಾಸ್ ಶಿಬರೂರು, ವಿನೀತ್ ಶೆಟ್ಟಿ ಕೋರ್ಯಾರು ಹೊಸಮನೆ, ದೇವಿಪ್ರಸಾದ್ ಶೆಟ್ಟಿ ಕೊಡೆತ್ತೂರು ಹೊಸಮನೆ, ಮುಗ್ರೋಡಿ ಸೇವಾಕರ್ತರಾದ ಸುಶಾಂತ್ ಶೆಟ್ಟಿ, ಸುಧಾಕರ  ಶಿಬರೂರು, ಇಂಜಿನಿಯರ್ ಸುಬ್ರಮಣ್ಯ, ವಿಜಯರಾಜ್, ದಿನೇಶ್ ಕುಲಾಲ್ ಅಡು ಮನೆ, ರಾಜೇಶ್ ಕುಲಾಲ್, ಪ್ರಸಾದ್ ಕುಲಾಲ್, ನಾರಾಯಣ ಕುಲಾಲ್, ಪ್ರಭಾಕರ ಶೆಟ್ಟಿ ಹೊಸಕಟ್ಟ, ಜಗದೀಶ್ ಶೆಟ್ಟಿ, ಸುದೀಪ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807