-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಕಟೀಲು ಜಾತ್ರಾ ಮಹೋತ್ಸವ - ರಸ್ತೆ ಸಂಚಾರದಲ್ಲಿ ಬದಲಾವಣೆ

ಕಟೀಲು ಜಾತ್ರಾ ಮಹೋತ್ಸವ - ರಸ್ತೆ ಸಂಚಾರದಲ್ಲಿ ಬದಲಾವಣೆ

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಏ.19ಶುಕ್ರವಾರ ದಿಂದ 20ಶನಿವಾರದ ವರೆಗೆ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಕಟೀಲು ಪರಿಸರದಲ್ಲಿ ವಾಹನ ಸಂಚಾರದಲ್ಲಿ ತಾತ್ಕಾಲಿಕವಾಗಿ ಮಾರ್ಪಡು ಮಾಡಲಾಗಿದೆ.

ಕಟೀಲು ಮುಖ್ಯ ರಸ್ತೆ (ರಥ ಬಿದಿ)ಯಲ್ಲಿ ಮಲ್ಲಿಗೆ ಅಂಗಡಿ ಕ್ರಾಸ್‍ನಿಂದ ದುರ್ಗಾ ಸಂಜೀವಿನಿ ಆಸ್ಪತ್ರೆ ಜಂಕ್ಷನ್ (ಕಲ್ಲಕುಮೇರು ಕ್ರಾಸ್) ವರೆಗೆ ವಾಹನ ಸಂಚಾರ ನಿಲುಗಡೆ ನಿಷೇಧಿಸಿದೆ. ಮಂಗಳೂರಿನಿಂದ ಕಟೀಲಿಗೆ ಬರುವ ವಾಹನಗಳು ಮಲ್ಲಿಗೆ ಅಂಗಡಿ ಕ್ರಾಸ್ ಬಳಿ ಎಡಕ್ಕೆ ಚಲಿಸಿ, ಗಿಡಿಗೆರೆ ರಸ್ತೆ ಮೂಲಕ ಕಟೀಲು ಪಾರ್ಕಿಂಗ್ ಸ್ಥಳಗಳಿಗೆ ಚಲಿಸುವುದು. ಕಟೀಲಿನಿಂದ ಮಂಗಳೂರಿಗೆ ಬರುವ ವಾಹನಗಳು ಕಟೀಲು ಪದವಿ ಪೂರ್ವ ಕಾಲೇಜು ಮೈದಾನದ ಪಕ್ಕದ ರಸ್ತೆಯ ಮೂಲಕ ಬ್ಯಾಂಕ್ ಆಫ್ ಬರೋಡಾ ಎದುರುಗಡೆ ರಸ್ತೆಯಲ್ಲಿ ಚಲಿಸಿ ಬಜಪೆ-ಮಂಗಳೂರು ಕಡೆಗೆ ಸಂಚರಿಸುವುದು. 

ಸರ್ವಿಸ್ ಬಸ್ಸು, ಟೂರಿಸ್ಟ್ ಬಸ್ಸು, ಕಾರು ಹಾಗೂ ಇತರ ವಾಹನಗಳಿಗೆ ಬಸ್ ಸ್ಟ್ಯಾಂಡ್ ಹಿಂಭಾಗ ಇರುವ ಸಿತ್ಲಾ ಮೈದಾನ ಹಾಗೂ ಕಟೀಲು ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ಹಾಗೂ ಅಪರ ದಂಡಾಧಿಕಾರಿಗಳು ಆಗಿರುವ ಅನುಪಮ್ ಅಗ್ರವಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ