-->

ದ.ಕ.ಜಿ.ಪಂ ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರಿನಲ್ಲಿ  ಶಾಲಾ ಪ್ರಾರಂಭೋತ್ಸವ

ದ.ಕ.ಜಿ.ಪಂ ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರಿನಲ್ಲಿ ಶಾಲಾ ಪ್ರಾರಂಭೋತ್ಸವ

ಎಕ್ಕಾರು :ದ.ಕ.ಜಿ.ಪಂ ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರಿನಲ್ಲಿ  ಶಾಲಾ ಪ್ರಾರಂಭೋತ್ಸವವು ಇಂದು ನಡೆಯಿತು. ವಿದ್ಯಾರ್ಥಿಗಳಿಂದ ಸರಕಾರಿ ಶಾಲೆಗಳಲ್ಲಿ ದೊರೆಯುವ  ಸೌಲಭ್ಯಗಳ ಬಗ್ಗೆ ಹಾಗೂ ಶಾಲಾ ದಾಖಲಾತಿ ಹೆಚ್ಚಿಸುವ ಬಗ್ಗೆ ಘೋಷಣೆಯನ್ನು ಮಾಡುತ್ತ  ಎಕ್ಕಾರು ಶ್ರೀಕೊಡಮಣಿತ್ತಾಯ ದೈವಸ್ಥಾನದ ದ್ವಾರದ ಬಳಿಯಿಂದ  ಎಕ್ಕಾರು ಶಾಲಾ ತನಕ  ಜಾಥಾ ನಡೆಯಿತು. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲೆಗೆ ದಾಖಲಾದ  51 ಕಿರಿಯ ವಿದ್ಯಾರ್ಥಿಗಳನ್ನು ಶಾಲೆಯ ಹಿರಿಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪುಷ್ಪಾರ್ಚನೆ ಹಾಗೂ ಆರತಿ ಮಾಡುವುದರ ಮೂಲಕ ಸ್ವಾಗತಿಸಿ ಶಾಲೆಗೆ ಬರಮಾಡಿಕೊಂಡರು. ಎಸ್ .ಡಿ.ಎಂ.ಸಿ ಅಧ್ಯಕ್ಷ ಸುದೀಪ್ ಅಮೀನ್  ಅವರು ಶಾಲಾ ಪ್ರಾರಂಭೋತ್ಸವವನ್ನು   ದೀಪ ಬೆಳಗಿಸಿ ಉದ್ಘಾಟಿಸಿ ಮಕ್ಕಳಿಗೆ ಶುಭಹಾರೈಸಿದರು.

  ವಿದ್ಯಾರ್ಥಿಗಳಿಗೆ ಸರಕಾರಿ ಸೌಲಭ್ಯಗಳಾದ ಸಮವಸ್ತ್ರ ಹಾಗೂ ಪಠ್ಯಪುಸ್ತಕವನ್ನು ವಿತರಣೆ ಹಾಗೂ ಎಸ್ ಡಿ ಎಂ ಸಿ ಸದಸ್ಯರ ವತಿಯಿಂದ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು  ವಿತರಿಸಲಾಯಿತು. ದೈಹಿಕ ಶಿಕ್ಷಕಿ ಶ್ರೀಮತಿ ವಿದ್ಯಾಲತಾ  ಅವರು  ಶಾಲೆಯಲ್ಲಿ ದೊರೆಯುವ ಸೌಲಭ್ಯಗಳು ಹಾಗೂ ಶಾಲೆಯ ಈ ಹಿಂದಿನ ಸಾಧನೆಗಳನ್ನು ಪೋಷಕರಿಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಸರಕಾರಿ ಪ್ರೌಢಶಾಲೆ ನಿರ್ವಹಿಸುವಂತಹ ಕರ್ತವ್ಯಗಳನ್ನು ಮನದಟ್ಟು ಮಾಡಿದರು. 
 ವೇದಿಕೆಯಲ್ಲಿ ಎಸ್ ಡಿ ಎಂ ಸಿ ಸದಸ್ಯ  ಮೇಲ್ವಿನ್ ಶ್ರೀ ಹರೀಶ್ ಚಂದ್ರ,  ಸುರೇಶ್, ಶ್ರೀಮತಿ ಪದ್ಮಾಕ್ಷಿ, ಶ್ರೀಮತಿ ಬಬಿತಾ ಉಪಸ್ಥಿತರಿದ್ದರು. ಶ್ರೀಮತಿ ಶಾಲಾ ಮುಖ್ಯೋಪಾಧ್ಯಾಯಿನಿ ಇಂದಿರಾ ಎನ್ ರಾವ್  ಸ್ವಾಗತಿಸಿದರು. ಶಿಕ್ಷಕಿ ಚಿತ್ರಶ್ರೀ. ಕೆ  ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶ್ರೀಮತಿ ವಿದ್ಯಾ ಗೌರಿ  ವಂದಿಸಿದರು.ಬಳಿಕ ಸಿಹಿತಿಂಡಿ ವಿತರಿಸಲಾಯಿತು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807