-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಕೆಂಚನಕೆರೆ ಯೋಗೋಪಾಸನ ಕೇಂದ್ರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಯೋಗ ಸಾಧಕರಿಗೆ ಗೌರವ ಕಾರ್ಯಕ್ರಮ

ಕೆಂಚನಕೆರೆ ಯೋಗೋಪಾಸನ ಕೇಂದ್ರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಯೋಗ ಸಾಧಕರಿಗೆ ಗೌರವ ಕಾರ್ಯಕ್ರಮ

ಮುಲ್ಕಿ:ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮುಲ್ಕಿ ಸಮೀಪದ ಕೆಂಚನಕೆರೆ ಯೋಗೋಪಾಸನ ಕೇಂದ್ರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಯೋಗ ಸಾಧಕರಿಗೆ ಗೌರವ ಕಾರ್ಯಕ್ರಮ ನಡೆಯಿತು
ಮುಖ್ಯ ಅತಿಥಿಗಳಾಗಿ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡಿ ಯೋಗವು ಭಾರತದ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆಯಾಗಿದ್ದು ಮನಸ್ಸು ಮತ್ತು ದೇಹದ ಏಕತೆಯನ್ನು ಸಾರುತ್ತದೆಎಂದರು
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕೆಂಚನಕೆರೆ ಯೋಗೋಪಾಸನ ಕೇಂದ್ರದ ಗುರುಗಳಾದ ಜಯ ಮುದ್ದು ಶೆಟ್ಟಿ ಮಾತನಾಡಿ ಯೋಗದಿಂದ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮ ಸಾಧ್ಯವಾಗಿದ್ದು  ಮಕ್ಕಳಿಂದ ಆದಷ್ಟು ಮೊಬೈಲ್ ದೂರವಿರಿಸಿ ಯೋಗದ ಮೂಲಕ ಆರೋಗ್ಯಕ್ಕೆ ಗಮನ ನೀಡಿ ಎಂದರು 
ಮುಖ್ಯ ಅತಿಥಿಗಳಾಗಿ ತುಳು ಜನಪದ ವಿದ್ವಾಂಸ ಡಾ. ಗಣೇಶ್ ಅಮೀನ್ ಸಂಕಮಾರ್, ಯೋಗ ಗುರುಗಳಾದ ನಾರಾಯಣ ಕೋಟ್ಯಾನ್, ಯಾದವ ದೇವಾಡಿಗ, ಕುಮಾರ್, ಪೊಲೀಸ್ ಅಧಿಕಾರಿ ಕಾಂತಪ್ಪ, ಅವಿಭಾಜಿತ ದ.ಕ.ಹಾಗೂ ಉಡುಪಿ ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಸಾಧಕರ ನೆಲೆಯಲ್ಲಿ ಯೋಗ ಗುರು ಜಯ ಮುದ್ದು ಶೆಟ್ಟಿ ರವರನ್ನು ಗೌರವಿಸಲಾಯಿತು. ಬಳಿಕ ಯೋಗ ಕಾರ್ಯಕ್ರಮ ನಡೆಯಿತು
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ