Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಶಿಮಂತೂರು ಶ್ರೀ ಆದಿಜನಾರ್ದನ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಸೀಯಾಳಾಭಿಷೇಕ

ಮುಲ್ಕಿ:ಶಿಮಂತೂರು ಶ್ರೀ ಆದಿಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಸೇವಾ ಯುವಕ ಮಂಡಲ ಮತ್ತು ಮಹಿಳಾ ಭಜನಾ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ  ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ಅನಾವೃಷ್ಟಿ , ಅಕಾಲವೃಷ್ಟಿ ಭಕ್ತಜನರ ಸಂಕಷ್ಟ ನಿವಾರಣಾ ನಿಮಿತ್ತ ಲೋಕಕಲ್ಯಾಣಾರ್ಥವಾಗಿ ರವಿವಾರ ಬೆಳಿಗ್ಗೆ ಗಂಟೆ 7 ಗಂಟೆಗೆ ಶ್ರೀ ಆದಿಜನಾರ್ದನ ದೇವರಿಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ಶ್ರೀ ದೇವರಿಗೆ ಸಾರ್ವಜನಿಕ ಸೀಯಾಳಾಭಿಷೇಕ , ಮಧ್ಯಾಹ್ನ ಸಾರ್ವಜನಿಕ ಹೂವಿನ ಪೂಜೆ ಕ್ಷೇತ್ರದ ಅರ್ಚಕರಾದ ಪುರುಷೋತ್ತಮ ಭಟ್ ಹಾಗೂ ವಿಷ್ಣುಮೂರ್ತಿ ಭಟ್ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭ ಕಿಲ್ಪಾಡಿ ಗ್ರಾಪಂ ಅಧ್ಯಕ್ಷ ವಿಕಾಸ್ ಶೆಟ್ಟಿ, ಅತಿಕಾಕಾರಿಬೆಟ್ಟು ಗ್ರಾಪಂ ಸದಸ್ಯೆ ಪದ್ಮಿನಿ ವಿಜಯ ಶೆಟ್ಟಿ,ಸೀತಾರಾಮ್ ಭಟ್, ಶ್ರೀಪತಿ ಭಟ್, ಉದಯಕುಮಾರ್ ಶೆಟ್ಟಿ ಅಧಿಧನ್,ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಯುವಕ ಮಂಡಲದ, ಭಜನಾ ಮಂಡಲದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.