-->


ಶಿಮಂತೂರು ಶ್ರೀ ಆದಿಜನಾರ್ದನ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಸೀಯಾಳಾಭಿಷೇಕ

ಶಿಮಂತೂರು ಶ್ರೀ ಆದಿಜನಾರ್ದನ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಸೀಯಾಳಾಭಿಷೇಕ

ಮುಲ್ಕಿ:ಶಿಮಂತೂರು ಶ್ರೀ ಆದಿಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಸೇವಾ ಯುವಕ ಮಂಡಲ ಮತ್ತು ಮಹಿಳಾ ಭಜನಾ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ  ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ಅನಾವೃಷ್ಟಿ , ಅಕಾಲವೃಷ್ಟಿ ಭಕ್ತಜನರ ಸಂಕಷ್ಟ ನಿವಾರಣಾ ನಿಮಿತ್ತ ಲೋಕಕಲ್ಯಾಣಾರ್ಥವಾಗಿ ರವಿವಾರ ಬೆಳಿಗ್ಗೆ ಗಂಟೆ 7 ಗಂಟೆಗೆ ಶ್ರೀ ಆದಿಜನಾರ್ದನ ದೇವರಿಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ಶ್ರೀ ದೇವರಿಗೆ ಸಾರ್ವಜನಿಕ ಸೀಯಾಳಾಭಿಷೇಕ , ಮಧ್ಯಾಹ್ನ ಸಾರ್ವಜನಿಕ ಹೂವಿನ ಪೂಜೆ ಕ್ಷೇತ್ರದ ಅರ್ಚಕರಾದ ಪುರುಷೋತ್ತಮ ಭಟ್ ಹಾಗೂ ವಿಷ್ಣುಮೂರ್ತಿ ಭಟ್ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭ ಕಿಲ್ಪಾಡಿ ಗ್ರಾಪಂ ಅಧ್ಯಕ್ಷ ವಿಕಾಸ್ ಶೆಟ್ಟಿ, ಅತಿಕಾಕಾರಿಬೆಟ್ಟು ಗ್ರಾಪಂ ಸದಸ್ಯೆ ಪದ್ಮಿನಿ ವಿಜಯ ಶೆಟ್ಟಿ,ಸೀತಾರಾಮ್ ಭಟ್, ಶ್ರೀಪತಿ ಭಟ್, ಉದಯಕುಮಾರ್ ಶೆಟ್ಟಿ ಅಧಿಧನ್,ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಯುವಕ ಮಂಡಲದ, ಭಜನಾ ಮಂಡಲದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article