ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಸಚಿವ ಅಭಯಚಂದ್ರ ಜೈನ್ ಭೇಟಿ
ಹಳೆಯಂಗಡಿ : ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಅಭಯಚಂದ್ರ ಜೈನ್ ಅವರು ಭೇಟಿ ನೀಡಿ ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುರಾಜ್ ಎಸ್ ಪೂಜಾರಿ, ಜೀರ್ಣೋದ್ಧಾರ ಸಮಿತಿ ಸದಸ್ಯ ಹರಿದಾಸ್ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪುರುಷೋತ್ತಮ್ ಕೋಟ್ಯಾನ್, ಅಶೋಕ್ ಕುಂದರ್ , ಹಾಗೂ ದೇವಳದ ಪ್ರಧಾನ ಅರ್ಚಕ ಟಿ ಕೆ ಮಧುಸೂದನ್ ಆಚಾರ್ ಉಪಸ್ಥಿತರಿದ್ದರು.