-->


ದ. ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು ,78ನೇ ಸ್ವಾತಂತ್ರ್ಯ ದಿನಾಚರಣೆ

ದ. ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು ,78ನೇ ಸ್ವಾತಂತ್ರ್ಯ ದಿನಾಚರಣೆ

 


ಬಜಪೆ:ದ. ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಶಾಲಾಭಿವೃದ್ದಿ ಮತ್ತು ಮೇಲಸ್ತುವಾರಿ ಸಮಿತಿ ಅಧ್ಯಕ್ಷ ಗುಣಪಾಲ್ ದೇವಾಡಿಗ ಧ್ವಜಾರೋಹಣ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಕೆಂಜಾರು ಕೆನರಾ ಬ್ಯಾಂಕ್ ನ ವ್ಯವಸ್ಥಾಪಕ ಸ್ವರೂಪ ರಾಕೇಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ, ನಮ್ಮ ಕ್ಲಿನಿಕ್ ವೈದ್ಯೆ ಡಾ! ಸಾಯಿಕಿರಣ್,ಮಳವೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಅರ್ಬಿ, ನಿವೃತ್ತ ಅಂಚೆ ನೌಕರ ರಮೇಶ್ ಸುವರ್ಣ, ಮಾಜಿ ಗ್ರಾಮ ಪಂಚಾಯತ್ ಸದಸ್ಯಭೋಜರಾಜ್ ಕೋಟ್ಯಾನ್, ಕೆಂಜಾರು ರಾಮಾಂಜನೇಯ ದೇವಸ್ಥಾನದ  ಅಧ್ಯಕ್ಷಮಹಾಬಲ ಪೂಜಾರಿ, ಶ್ರೀದೇವಿ ಗೇಮ್ಸ್ ಕ್ಲಬ್ ಅಧ್ಯಕ್ಷ ರವಿ ಶೆಟ್ಟಿ, ಯುವಕ ಮಂಡಲ ಅಧ್ಯಕ್ಷ ಪಾಂಡುರಂಗ ಪ್ರಭು, ಯುವವಾಹಿನಿ ಕೆಂಜಾರು ಕರಂಬಾರು ಅಧ್ಯಕ್ಷ ವಿನೋದ್ ಅರ್ಬಿ, ಓಂಕಾರ್ ಫ್ರೆಂಡ್ಸ್ ಕೆಂಜಾರು ಕರಂಬಾರು ಅಧ್ಯಕ್ಷ ಶಿವರಾಮ್. ಪಿ.ಕುಂದರ್, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಎಸ್ ಡಿಎಂಸಿ ಸದಸ್ಯರುಗಳು ಉಪಸ್ಥಿತರಿದ್ದರು.
ಶಿಕ್ಷಕಿ ವೈಶಾಲಿ ಪ್ರಾಸ್ತವಿಕ ಮಾತನಾಡಿದರು

ಶಾಲಾ ಮುಖ್ಯ ಶಿಕ್ಷಕಿ ಉಷಾ ಕಿರಣ ಸ್ವಾಗತಿಸಿದರು. ಶಿಕ್ಷಕಿ 
ಪವಿತ್ರ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕಿ ಮಾಲಾಶ್ರೀ ವಂದಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article