-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಶಿಮಂತೂರು: ಮಕ್ಕಳಲ್ಲಿ ಧರ್ಮ ಜಾಗೃತಿ ಜೊತೆಗೆ ಸಂಸ್ಕಾರ ಮತ್ತು ಸಂಸ್ಕೃತಿ ಇರಲಿ -ನಿತಿನ್ ಕೆ ಶೆಟ್ಟಿ

ಶಿಮಂತೂರು: ಮಕ್ಕಳಲ್ಲಿ ಧರ್ಮ ಜಾಗೃತಿ ಜೊತೆಗೆ ಸಂಸ್ಕಾರ ಮತ್ತು ಸಂಸ್ಕೃತಿ ಇರಲಿ -ನಿತಿನ್ ಕೆ ಶೆಟ್ಟಿ

ಮುಲ್ಕಿ: ಪಂಜಿನಡ್ಕ ಫ್ರೆಂಡ್ಸ್ ಹಾಗೂ ಶ್ರೀ ಆದಿ ಜನಾರ್ದನ ಸೇವಾ ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಗ್ರಾಮೀಣ ಮಟ್ಟದ ವಿವಿಧ ಕ್ರೀಡಾಕೂಟ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಆವರಣದಲ್ಲಿ ನಡೆಯಿತು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉದ್ಯಮಿ ನಿತಿನ್ ಕೆ ಶೆಟ್ಟಿ ಮಾತನಾಡಿ ಕ್ರೀಡಾಕೂಟದಿಂದ ಮಕ್ಕಳಲ್ಲಿ ಧನಾತ್ಮಕ ಶಕ್ತಿ ನಿರ್ಮಾಣವಾಗಿ ದೈಹಿಕ ಹಾಗೂ ಶಾರೀರಿಕ ಬೆಳವಣಿಗೆ ಸಾಧ್ಯ, ಧರ್ಮ ಜಾಗೃತಿ ಮೂಲಕ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಉಳಿಸಲು ಪ್ರಯತ್ನಿಸೋಣ ಎಂದರು. ಮುಖ್ಯ ಅತಿಥಿಗಳಾಗಿ ವಿಷ್ಣುಮೂರ್ತಿ ಭಟ್, ಅತಿಕಾರಿಬೆಟ್ಟುಗ್ರಾ.ಪಂ ಸದಸ್ಯೆ ಪದ್ಮಿನಿ ವಿಜಯಶೆಟ್ಟಿ,  ಪಂಜಿನಡ್ಕ ಫ್ರೆಂಡ್ಸ್ ನ ಕಿಶೋರ್ ಶೆಟ್ಟಿ ತೆಂಗಾಳಿ,ಶ್ರೀ ಆದಿ ಜನಾರ್ದನ ಸೇವಾ ಯುವಕ ಮಂಡಲದ ದೀಪಕ್ ಶಿಮಂತೂರು, ದೇವಸ್ಥಾನದ ಉಪ ಪ್ರಬಂಧಕಿ ರಕ್ಷಿತಾ ಮತ್ತಿತರರು ಉಪಸ್ಥಿತರಿದ್ದರು ಗೋಪಾಲ್ ಶಿಮಂತೂರು ನಿರೂಪಿಸಿದರು. ಬಳಿಕ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ