-->


ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ಇದರ ನೂತನ ಅಧ್ಯಕ್ಷರಾಗಿ  ಮೋಹನ್ ಪೂಜಾರಿ ಆಯ್ಕೆ

ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ಇದರ ನೂತನ ಅಧ್ಯಕ್ಷರಾಗಿ ಮೋಹನ್ ಪೂಜಾರಿ ಆಯ್ಕೆ

 
ತೋಕೂರು:ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ಇದರ 5ನೇ ವಾರ್ಷಿಕ ಮಹಾಸಭೆಯು ಸೆ.1   ರಂದು ಇಲ್ಲಿನ  ಓಂಕಾರೇಶ್ವರಿ ಮಂದಿರದಲ್ಲಿ ಅಧ್ಯಕ್ಷ  ಸದಾಶಿವ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ವೇಳೆ ನೂತನ ಪದಾಧಿಕಾರಿಗಳ  ಆಯ್ಕೆಯು ನಡೆಯಿತು. ಗೌರವಾಧ್ಯಕ್ಷರಾಗಿ ಜಯಕೃಷ್ಣ ಕೋಟ್ಯಾನ್, ಅಧ್ಯಕ್ಷರಾಗಿ ಮೋಹನ್ ಪೂಜಾರಿ ಸುಬ್ರಹ್ಮಣ್ಯ ನಗರ, ಉಪಾಧ್ಯಕ್ಷರಾಗಿ  ಸಂಪತ್ ಜೆ ಶೆಟ್ಟಿ ಮತ್ತು ಪದ್ಮರಾಜ್ ಕರ್ಕೇರ, ಪ್ರಧಾನ ಕಾರ್ಯದರ್ಶಿಯಾಗಿ ಭಾಸ್ಕರ್ ಅಮೀನ್ ತೋಕೂರು, ಜೊತೆ ಕಾರ್ಯದರ್ಶಿಗಳಾಗಿ  ಶ್ರೀನಿವಾಸ , ಶ್ರೀಮತಿ ಪ್ರೇಮಲತಾ ಯೋಗೀಶ್ ,ಕೋಶಾಧಿಕಾರಿಯಾಗಿ ನವೀನ್ ಚಂದ್ರ ಅಮೀನ್, ಆಂತರಿಕ ಲೆಕ್ಕ ಪರಿಶೋಧಕರಾಗಿ  ಹಿಮಕರ್ ಟಿ. ಸುವರ್ಣ ಕಲ್ಲಾಡಿ, ಸಂಘಟನಾ ಕಾರ್ಯದರ್ಶಿ ಮತ್ತು ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ  ಮೋಹನ್ ಪೂಜಾರಿ ಅವರು  ಮಾತನಾಡಿ ಯಕ್ಷಗಾನ ಕಲೆಯನ್ನು ಇನ್ನಷ್ಟು ಉಳಿಸುವ ಪ್ರಯತ್ನ ನಮ್ಮಿಂದ ಆಗಬೇಕಿದೆ ಇದಕ್ಕೆ ಎಲ್ಲರ ಸಹಕಾರ ಅತ್ಯಗತ್ಯ ಎಂದರು. 

ಉಪಾಧ್ಯಕ್ಷರಾದ ಸಂಪತ್ ಜೆ ಶೆಟ್ಟಿ ಮಾತನಾಡಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವಲ್ಲಿ ನಮ್ಮೆಲ್ಲರ ಪರಿಶ್ರಮ ಅಗತ್ಯ ಎಂದರು.

ಸಂಘಟನೆಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಅಮೀನ್ ತೋಕೂರು  ವಾರ್ಷಿಕ ಆಯವ್ಯಯದ ಮಂಡನೆಯನ್ನು ಮಂಡಿಸಿದರು. ಶ್ರೀಮತಿ ಕುಸುಮ  ಪ್ರಾರ್ಥಿಸಿದರು.  ಭಾಸ್ಕರ್ ಅಮೀನ್ ತೋಕೂರು ಕಾರ್ಯಕ್ರಮ ನಿರೂಪಿಸಿದರು.

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article