Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...




ಪೇಸ್ಬುಕ್ ಮೂಲಕ ಆಶ್ಲೀಲ ಸಂದೇಶ,ಯುವತಿ ಆತ್ಮಹತ್ಯೆ ಯತ್ನ ಪೊಲೀಸ್ ಇಲಾಖೆ ವೈಫಲ್ಯಕ್ಕೆ ಡಾ. ಭರತ್ ಶೆಟ್ಟಿ ತೀವ್ರ ಆಕ್ರೋಶ



ಸುರತ್ಕಲ್: ಸುರತ್ಕಲ್  ಇಡ್ಯಾ ನಿವಾಸಿ ಹಿಂದೂ ಯುವತಿ ಒಬ್ಬಳಿಗೆ ಫೇಸ್ಬುಕ್ ಮೆಸೆಂಜರ್ ಮೂಲಕ ಅಶ್ಲೀಲ ಮೆಸೇಜ್ 
ಹಾಗೂ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ ಯುವಕನ ವಿರುದ್ಧ  ಕ್ಷಿಪ್ರ ಕ್ರಮವನ್ನು 
ಪೊಲೀಸರು ಕೈಗೊಳ್ಳದೆ ಇದ್ದ ಪರಿಣಾಮ  ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ ಎಂದು  ಪೊಲೀಸ್ ವೈಫಲ್ಯದ ವಿರುದ್ಧ ಶಾಸಕರಾದ  ಡಾ. ಭರತ್ ಶೆಟ್ಟಿ  ವೈ ಆಕ್ರೋಶ ವ್ಯಕ್ತಪಡಿಸಿದ್ದಾರೆ 

ಯುವತಿ ಕುಟುಂಬಸ್ಥರು ದೂರು ದಾಖಲಿಸುವ ಸಂದರ್ಭವೇ ನಿರ್ಲಕ್ಷವಾಗಿ ವರ್ತಿಸಿರುವ ಠಾಣಾ ಪೊಲೀಸರ ಕ್ರಮ ಖಂಡನೀಯ. 
ಯುವತಿ ಇದೀಗ ಜೀವನ್ಮರಣದ ಸ್ಥಿತಿಯಲ್ಲಿದ್ದು ಇದರ ಜವಾಬ್ದಾರಿಯನ್ನು ಪೊಲೀಸರೇ ಹೊರಬೇಕು . 
ಹಿಂದೂ ಕಾರ್ಯಕರ್ತರು ಸಹನೆ ಕಳೆದುಕೊಳ್ಳುವ ಮುನ್ನ, ಜಿಲ್ಲಾಡಳಿತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರನ್ನು ಬಂಧಿಸುವ ಮೂಲಕ 
ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.