-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಮಾದಕ ವಸ್ತುಗಳ ಸೇವನೆಯಿಂದ ವಿದ್ಯಾರ್ಥಿಗಳು ದೂರವಿರಿ  - ಸತೀಶ್ ನಾಯಕ್

ಮಾದಕ ವಸ್ತುಗಳ ಸೇವನೆಯಿಂದ ವಿದ್ಯಾರ್ಥಿಗಳು ದೂರವಿರಿ - ಸತೀಶ್ ನಾಯಕ್




ಬಜಪೆ:ಸಮಾಜಘಾತಕ ಶಕ್ತಿಗಳು ಮುಗ್ಧ ಮನಸುಗಳನ್ನು ಮಾದಕ ವಸ್ತುಗಳ ಸೇವನೆಗೆ ಪ್ರಚೋದನೆ ನೀಡಿ ದೇಶದ ಭವ್ಯ ಭವಿಷ್ಯದ ದಿಕ್ಕು ತಪ್ಪಿಸುವ ಹುನ್ನಾರ ನಡೆಯುತ್ತಿದೆ.ಪ್ರತಿಯೊಬ್ಬ ವಿದ್ಯಾರ್ಥಿಯು ಇಡೀ ಸಮಾಜಕ್ಕೆ ಅತ್ಯಮೂಲ್ಯ ಸಂಪತ್ತು ಇಂತಹ ದುಶ್ಚಟಗಳಿಗೆ ವಿದ್ಯಾರ್ಥಿಗಳು ಬಳಿಯಾಗದೆ ಸ್ವಸ್ಥ ಮತ್ತು ಬಲಿಷ್ಠ ರಾಷ್ಟ್ರ ಸ್ಥಾಪನೆಗೆ ಅಣಿಯಾಗಬೇಕು ಎಂದು  ಮಂಗಳೂರು ಉತ್ತರ ವಲಯ 2 ರ  ಅಬಕಾರಿ ಉಪನಿರೀಕ್ಷಕ ಸತೀಶ್ ನಾಯಕ್ ಹೇಳಿದರು.ಅವರು ಬುಧವಾರದಂದು ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರು ಇಲ್ಲಿ  ಅಬಕಾರಿ ಇಲಾಖೆ ಮಂಗಳೂರು ಉತ್ತರ ವಲಯ -2  ಇವರ ವತಿಯಿಂದ 'ವಿದ್ಯಾರ್ಥಿಗಳಲ್ಲಿ ಡ್ರಗ್ಸ್ ಬಳಕೆಯ ದುಷ್ಪರಿಣಾಮಗಳು ಹಾಗೂ ಅವುಗಳಿಂದ ದೂರವಿರುವುದು ಹೇಗೆ ಎಂಬ ವಿಶೇಷ ಜಾಗೃತಿ ಕಾರ್ಯಕ್ರಮ'ದಲ್ಲಿ ಭಾಗವಹಿಸಿ ಮಾತನಾಡಿದರು.


ಈ ಸಂದರ್ಭ  ಅಬಕಾರಿ ಇಲಾಖೆಯ ಸೋಮೇಶ್ ಹಣಗಂಡಿ, ಶಾಲಾ  ಮುಖ್ಯ ಶಿಕ್ಷಕಿ ಶ್ರೀಮತಿ ಇಂದಿರಾ ಎನ್ .ರಾವ್, ಶಿಕ್ಷಕಿಯರಾದ ಶ್ರೀಮತಿ ಪೂರ್ಣಿಮಾ, ಚಿತ್ರಶ್ರೀ ಕೆ ಎಸ್, ಶ್ರೀಮತಿ ಜ್ಯೋತಿ ಬಿ, ಉಪಸ್ಥಿತರಿದ್ದರು. ಶ್ರೀಮತಿ ವಿನ್ನಿ ನಿರ್ಮಲ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ