ಉರುಳಿಬಿದ್ದ ಕ್ರೇನ್,ಅಪರೇಟರ್ ಸಾವು
Wednesday, December 18, 2024
ಬಜಪೆ:ಬೃಹತ್ ಕ್ರೇನೊಂದು ಅಪರೇಟರ್ ನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಮಂಗಳವಾರ ರಾತ್ರಿ ಕೆಂಜಾರು ಬಳಿ ನಡೆದಿದೆ.ಘಟನೆಯಲ್ಲಿ ಉತ್ತರ ಪ್ರದೇಶದ ಕ್ರೇನ್ ಅಪರೇಟರ್ ಗಂಭೀರವಾಗಿ ಗಾಯಗೊಂಡಿದ್ದು,ಚಿಕಿತ್ಸೆಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಅದ್ಯಪಾಡಿಯಿಂದ ಕೆಂಜಾರಿಗೆ ಬರುತ್ತಿದ್ದ ಕ್ರೇನ್ ಕೆಂಜಾರು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ಅಪರೇಟರ್ ನ ನಿಯಂತ್ರಣ ತಪ್ಪಿ ಸುಮಾರು 20 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದೆ.ಉರುಳಿ ಬಿದ್ದ ಪರಿಣಾಮ ಕ್ರೇನ್ ಅಪರೇಟರ್ ಕ್ರೇನ್ ನ ಅಡಿ ಭಾಗದಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದರು.ಗಂಭೀರವಾಗಿ ಗಾಯಗೊಂಡ ಕ್ರೇನ್ ಅಪರೇಟರ್ ರನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು,ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.