-->


ಕೊಲ್ನಾಡು :  ಸುಮಾರು 14 ಲಕ್ಷ ವೆಚ್ಚದ ಕಾಲುಸಂಕ  ನಿರ್ಮಾಣಕ್ಕೆ   ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ

ಕೊಲ್ನಾಡು : ಸುಮಾರು 14 ಲಕ್ಷ ವೆಚ್ಚದ ಕಾಲುಸಂಕ ನಿರ್ಮಾಣಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ

ಹಳೆಯಂಗಡಿ:ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ನಾಡು ರಾಷ್ಟ್ರೀಯಹೆದ್ದಾರಿ ಸೇತುವೆ ಬಳಿಯ ತೈತೋಟದ ಸಮೀಪ ಸುಮಾರು 14 ಲಕ್ಷ ವೆಚ್ಚದ ಕಾಲುಸಂಕ  ನಿರ್ಮಾಣಕ್ಕೆ  ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಶಿಲಾನ್ಯಾಸ ನೆರವೇರಿಸಿದರು.
 ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್  ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. 
ಮುಖ್ಯ ಅತಿಥಿಗಳಾಗಿ ಪಂಚಾಯತ್ ಉಪಾಧ್ಯಕ್ಷ ಹೇಮನಾಥ ಅಮೀನ್, ಸದಸ್ಯರಾದ ವಿನೋದ್ ಸಾಲ್ಯಾನ್ ಬೆಳ್ಳಾಯರು,ಮಾಜೀ ತಾಪಂ ಸದಸ್ಯೆ ಸಾವಿತ್ರಿ ಸುವರ್ಣ, ಬಿಜೆಪಿ ನಾಯಕರಾದ ಲಕ್ಷ್ಮಣ ಸಾಲ್ಯಾನ್,ಶ್ಯಾಮ್ ಪ್ರಸಾದ್,ದಿವ್ಯೇಶ್ ದೇವಾಡಿಗ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುದೀರ್, ಗುತ್ತಿಗೆದಾರ ಮಹಮದ್ ಇಮ್ರಾನ್ ಹಾಗೂ ಮೊದಲಾದವರು  ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article