-->

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಟೈಮ್ಸ್ ಆಫ್ ಕುಡ್ಲ ಪತ್ರಿಕೆ ಸಂಪಾದಕ ಶಶಿ ಆರ್. ಬಂಡಿಮಾರ್ ಹೃದಯಾಘಾತದಿಂದ ನಿಧನ

ಟೈಮ್ಸ್ ಆಫ್ ಕುಡ್ಲ ಪತ್ರಿಕೆ ಸಂಪಾದಕ ಶಶಿ ಆರ್. ಬಂಡಿಮಾರ್ ಹೃದಯಾಘಾತದಿಂದ ನಿಧನ


ಮಂಗಳೂರು: "ಟೈಮ್ಸ್ ಆಫ್ ಕುಡ್ಲ" ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್. ಬಂಡಿಮಾರ್ (41) ಬುಧವಾರ ರಾತ್ರಿ ನಾಗಾಲ್ಯಾಂಡ್ ನಲ್ಲಿ ಹೃದಯಾಘಾತದಿಂದ ನಿಧನರಾದರು.
ಅವರು ತಾಯಿ, ಪತ್ನಿ, ಸಹೋದರಿ, ಇಬ್ಬರು ಸಹೋದರರು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ತುಳು ಸಂಸ್ಕೃತಿ ಆಚಾರ ವಿಚಾರದ ಉಳಿವಿಗಾಗಿ ಶ್ರಮಿಸಿ "ಟೈಮ್ಸ್ ಆಫ್ ಕುಡ್ಲ" ಎಂಬ ತುಳು ವಾರಪತ್ರಿಕೆಯನ್ನು 15 ವರ್ಷಗಳಿಂದ ನಡೆಸಿಕೊಂಡು ಬಂದಿದ್ದರು. ಸಣ್ಣ ಕೈಗಾರಿಕೆಯಲ್ಲೂ,  ಆತಿಥ್ಯ ಕ್ಷೇತ್ರ ದಲ್ಲೂ ಸಕ್ರಿಯವಾಗಿದ್ದ ಅವರು ನಾಗಾಲ್ಯಾಂಡ್ ನಲ್ಲಿ ತನ್ನ ಮರದ ಫ್ಯಾಕ್ಟರಿಗೆ ಹೋಗಿದ್ದಾಗ ಅನಾರೋಗ್ಯ ಕಾಡಿತ್ತು.
ಶಶಿ ಬಂಡಿಮಾರ್ ಅವರಿಗೆ ಜೈ ತುಲುನಾಡ್ (ರಿ) ಸಂಘಟನೆ "ತುಳುವ ನೇಸರೆ" ಎನ್ನುವ ಬಿರುದು ಸೇರಿದಂತೆ ಅನೇಕ ಬಿರುದು ಪ್ರಶಸ್ತಿಗಳನ್ನು ಅನೇಕ ತುಳು ಸಂಘಟನೆಗಳು ನೀಡಿ ಗೌರವಿಸಿದ್ದವು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ