-->


ಕಾರ್ನಾಡ್ ಹರಿಹರ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಶ್ರೀ ವಿಷ್ಣು ಸಹಸ್ರನಾಮ ಹೋಮ

ಕಾರ್ನಾಡ್ ಹರಿಹರ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಶ್ರೀ ವಿಷ್ಣು ಸಹಸ್ರನಾಮ ಹೋಮ

ಮುಲ್ಕಿ: ಕಾರ್ನಾಡ್ ಹರಿಹರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಶುಕ್ರವಾರ ಬೆಳಿಗ್ಗೆ ಕ್ಷೇತ್ರದ ತಂತ್ರಿಗಳಾದ ಶಿಬರೂ ರು ಗೋಪಾಲಕೃಷ್ಣ ತಂತ್ರಿ ಹಾಗೂ ಕ್ಷೇತ್ರದ ಅರ್ಚಕ ಹಯಗ್ರೀವ ಪಡ್ಡಿಲಾಯ ನೇತೃತ್ವದಲ್ಲಿ ಮಹಾ ಸುದರ್ಶನ ಹೋಮ, ಪುರುಷ ಸೂಕ್ತ ಹೋಮ, ಪ್ರಾಯಶ್ಚಿತ ಹೋಮ, ವಿಷ್ಣು ಸಹಸ್ರನಾಮ ನಡೆಯಿತು.
ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು 
ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು
ಈ ಸಂದರ್ಭ ಕಟೀಲು ಕ್ಷೇತ್ರದ ಅರ್ಚಕ ವೆಂಕಟರಮಣ ಆಸ್ರಣ್ಣ, ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ,ದೇವಸ್ಥಾನದ ಆಡಳಿತ ಮೊಕ್ತೇಸರ ಎಂ ಎಚ್ ಅರವಿಂದ ಪೂಂಜಾ, ವ್ಯವಸ್ಥಾಪನಾ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಸದಸ್ಯರಾದ ಜೀವನ್ ಶೆಟ್ಟಿ,
ರವಿಕುಮಾರ್, ಶಶೀoದ್ರ ಸಾಲ್ಯಾನ್, ರಾಘವೇಂದ್ರ ರಾವ್, ನೂತನ್ ಶೆಟ್ಟಿ, ಹರ್ಷರಾಜ ಶೆಟ್ಟಿ, ಸುರೇಶ್ ರಾವ್, ವಿಷ್ಣುಮೂರ್ತಿ, ಪ್ರವೀಣ್ ಕೋಟ್ಯಾನ್, ಕೃಷ್ಣ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.
ಕ್ಷೇತ್ರದಲ್ಲಿ ಶ್ರೀ ವಿಷ್ಣುಮೂರ್ತಿ ದೇವರಿಗೆ ಫೆಬ್ರವರಿ 16ರಂದು 8:15ಕ್ಕೆ ಕುಂಭಲಗ್ನದಲ್ಲಿ ಅಷ್ಟ ಬಂಧ ಬ್ರಹ್ಮಕಲಶಾಭಿಷೇಕ ನಡೆಯಲಿದೆ
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article