-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಕೆರೆಕಾಡಿನಲ್ಲಿ ಗ್ರಾಮ ವಿಕಾಸ ಸಮಿತಿಯ ಸಂಯೋಜನೆಯಲ್ಲಿ ಉಚಿತ ವೈದ್ಯಕೀಯ ಶಿಬಿರ.ಆರೋಗ್ಯದ ಬಗ್ಗೆ ನಿರ್ಲಕ್ಷ ಬೇಡ : ಡಾ.ರಮ್ಯ

ಕೆರೆಕಾಡಿನಲ್ಲಿ ಗ್ರಾಮ ವಿಕಾಸ ಸಮಿತಿಯ ಸಂಯೋಜನೆಯಲ್ಲಿ ಉಚಿತ ವೈದ್ಯಕೀಯ ಶಿಬಿರ.ಆರೋಗ್ಯದ ಬಗ್ಗೆ ನಿರ್ಲಕ್ಷ ಬೇಡ : ಡಾ.ರಮ್ಯ


ಮೂಲ್ಕಿ:ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ, ಇದರ ಬಗ್ಗೆ ನಿರ್ಲಕ್ಷ ಸಲ್ಲದು, ಉತ್ತಮ ಪರಿಸರದೊಂದಿಗೆ ಸ್ವಚ್ಚತೆಯೊಂದಿಗೆ ಆರೋಗ್ಯದ ಬಗ್ಗೆಯೂ ಜಾಗೃತಿ ಮೂಡಿಸಬೇಕು ಎಂದು ಮಂಗಳೂರಿನ ವೈದ್ಯೆ ಡಾ. ರಮ್ಯ ಹೇಳಿದರು. 
ಅವರು ಮೂಲ್ಕಿ ಬಳಿಯ ಕೆರೆಕಾಡು ಬೆಳ್ಳಾಯರುವಿನ ಶ್ರೀ ಸ್ವಾಮಿ ಕೊರಗಜ್ಜ ಸಭಾಭವನದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. 
ಕೆಮ್ರಾಲ್‌ನ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಮಾರ್ಗರೇಟ್ ಸುದರ್ಶಿನಿ ಆರೋಗ್ಯದ ಬಗ್ಗೆ ವಿಶೇಷ ಮಾಹಿತಿ ನೀಡಿದರು. 
ಮಂಗಳೂರಿನ ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಶನ್, ಮೂಲ್ಕಿ ತಾಲ್ಲೂಕಿನ ಸೇವಾ ವಿಭಾಗ, ಕೆರೆಕಾಡು ಗ್ರಾಮ ವಿಕಾಸ ಸಮಿತಿ, ಕೆಟಿಎಂ ಫ್ರೆಂಡ್ಸ್ ಬೆಳ್ಳಾಯರು ಜಂಟಿಯಾಗಿ ಶಿಬಿರವನ್ನು ಆಯೋಜಿಸಿದ್ದವು. 
ಸಾತ್ವಿಕ್ ಮಂಗಳೂರು, ಸಮುದಾಯ ಆರೋಗ್ಯ ಅಧಿಕಾರಿ ಕೋಮಲ, ಆಶಾ ಕಾರ್ಯಕರ್ತೆ ವನಜಾ, ಗ್ರಾಮ ವಿಕಾಸ ಸಮಿತಿಯ ಮಾಧವ ಶೆಟ್ಟಿಗಾರ್, ಕೆಟಿಎಂ ಫ್ರೇಂಡ್ಸ್‌ನ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.
ಕೊರಗ ಕಾಲೋನಿಯ ಸಹಿತ ಕೆರೆಕಾಡಿನ ಗ್ರಾಮದ ನೂರಕ್ಕೆ ಹೆಚ್ಚು ಮಂದಿ ಶಿಬಿರದ ಪ್ರಯೋಜನ ಪಡೆದರು.   
ಸತೀಶ್ ಸ್ವಾಗತಿಸಿದರು, ಯತೀಶ್ ವಂದಿಸಿದರು, ಹರ್ಷ ಕಾರ್ಯಕ್ರಮ ನಿರೂಪಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ