ಸಂಪೂರ್ಣವಾಗಿ ಜೀರ್ಣೋದ್ದಾರಗೊಂಡಿರುವ ಇತಿಹಾಸ ಪ್ರಸಿದ್ದ ಕ್ಷೇತ್ರಗಳಲ್ಲಿ ಒಂದಾಗಿರುವ ಬಜಪೆ ಸಮೀಪದ ಅದ್ಯಪಾಡಿಯ ಶ್ರೀ ಆದಿನಾಥೇಶ್ವರ ದೇವಸ್ಥಾನದಲ್ಲಿ ರವಿವಾರದಂದು ಪೂರ್ವಾಹ್ನ 10:30ಕ್ಕೆ ವೃಷಭ ಲಗ್ನ ದಲ್ಲಿ ಶ್ರೀ ಆದಿನಾಥೇಶ್ವರ ದೇವರಿಗೆ ಬ್ರಹ್ಮಕಲಶಾಭಿಷೇಕವು ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.