-->

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ,ಇಬ್ಬರು ಸಾವು

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ,ಇಬ್ಬರು ಸಾವು

ಕಿನ್ನಿಗೋಳಿ:ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ ಮೂಲ್ಕಿ ರಾಜ್ಯ ಹೆದ್ದಾರಿಯ ಬಟ್ಟಕೋಡಿ ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.ಘಟನೆಯಲ್ಲಿ ಸವಾರ ಹಾಗೂ ಸಹ ಸವಾರ ಸಾವನ್ನಪ್ಪಿದ್ದು,ಸಾವನ್ನಪ್ಪಿದವರನ್ನು ಧಾರವಾಡ ಸವದತ್ತಿ ನಿವಾಸಿಗಳಾದ ಕಿನ್ನಿಗೋಳಿಯ ಪದ್ಮನೂರು ಹಾಗೂ ಮೂಲ್ಕಿಯಲ್ಲಿ ವಾಸ್ತವ್ಯವಿದ್ದ ನವೀನ್ (26)ಹಾಗೂ ಆತ್ಮಾನಂದ(27) ಎಂದು ಗುರುತಿಸಲಾಗಿದೆ.ಮೃತರು ಪದ್ಮನೂರಿನ ಪ್ರತ್ಯಂಗೀರಾ  ಎಂಬ ರೆಡಿಮೆಡ್ ಆವರಣ ಗೋಡೆ  ನಿರ್ಮಾಣದ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು.

ಘಟನೆಯಲ್ಲಿ ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು,ಬೈಕ್ ಕೂಡ ನಜ್ಜುಗುಜ್ಜಾಗಿದೆ.
ಸೋಮವಾರ ರಾತ್ರಿ ಕೆಲಸದ ನಿಮಿತ್ತ ಪದ್ಮನೂರಿನಿಂದ ಕಿನ್ನಿಗೋಳಿಕಡೆಗೆ ಹೊಗುತ್ತಿದ್ದಾಗ ಬೈಕ್ ಸವಾರನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಮೆಸ್ಕಾಂ ಕಿನ್ನಿಗೋಳಿ ವಿಭಾಗದ ಅಧಿಕಾರಿಗಳು ಹಾಗೂ ಮಂಗಳೂರು ಉತ್ತರ ಟ್ರಾಫಿಕ್ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ