
ನಡಿಬೆಟ್ಟು ಶ್ರೀ ಧೂಮಾವತಿ ಹಾಗೂ ಬಂಟ ದೈವದ ನೇಮೋತ್ಸವ
Sunday, March 16, 2025
ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ನಡಿಬೆಟ್ಟು ಶ್ರೀ ಧೂಮಾವತಿ ದೈವಸ್ಥಾನದಲ್ಲಿ ನೇಮೋತ್ಸವ ಶುಕ್ರವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಗುರುವಾರ ರಾತ್ರಿ ಭಂಡಾರ ಇಳಿಯುವುದು, ಶುಕ್ರವಾರ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ರಾತ್ರಿ ಶ್ರೀ ಧೂಮಾವತಿ ಮತ್ತು ಬಂಟ ದೈವದ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು
ಈ ಸಂದರ್ಭ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಉಮಾನಾಥ ಕೋಟ್ಯಾನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ ರೈ,ಮತ್ತಿತರರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು
ಸುಬ್ರಹ್ಮಣ್ಯ ಭಟ್ ದೇoದಡ್ಕ ದೈವಸ್ಥಾನದ ಆಡಳಿತ ಮೊಕ್ತೇಸರ ಗುತ್ತಿನಾರ್ ಸುಧಾಕರ್ ಶೆಟ್ಟಿ ದೆಪ್ಪುಣಿಗುತ್ತು, ಜಗದೀಶ ಪ್ರಭು ಪನಿಕೆರೆ,
ರಾಮದಾಸ ಶೆಟ್ಟಿ ಬಾಳಿಕೆ ಮನೆ, ಶಿವ ಚಂದ್ರ ಶೆಟ್ಟಿ, ವಿಜಿತ್ ಶೆಟ್ಟಿ, ಜನಾನಂದ ಶೆಟ್ಟಿ ತಿಂಗೊಳೆ ಮನೆ, ಗಂಗಾಧರ ಶೆಟ್ಟಿ ಬರ್ಕೆ ತೋಟ, ಕಿಶೋರ್ ಶೆಟ್ಟಿ ದೆಪ್ಪುಣಿಗುತ್ತು,ಉತ್ತಮ್ ಪೂಜಾರಿ ಮೈಲೊಟ್ಟು ಮತ್ತಿತರರು ಉಪಸ್ಥಿತರಿದ್ದರು