
ಶಿಮಂತೂರು: ಶ್ರೀ ದೇವರ ವಿಜೃಂಭಣೆಯ ಪಲ್ಲಕ್ಕಿ ಉತ್ಸವ, ಮಹಾರಥೋತ್ಸವ
Wednesday, March 19, 2025
ವಿಡಿಯೋ ಗಾಗಿ ಕ್ಲಿಕ್ ಮಾಡಿ https://youtu.be/eF34gJpZ0OA?si=7Ay9bZ6Lm0cGbsba
ಮುಲ್ಕಿ: ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ದೇವರ ಪಲ್ಲಕಿ ಉತ್ಸವ, ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿ ಅರ್ಚಕ ಪುರುಷೋತ್ತಮ ಭಟ್ ನೇತೃತ್ವದಲ್ಲಿ ಪ್ರಾತಃಕಾಲ ವಿಶೇಷ ಪ್ರಾರ್ಥನೆ, ಕವಾಟೋದ್ಘಾಟನೆ ತುಲಾಭಾರ ಸೇವೆ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ರಾತ್ರಿ ಪಲ್ಲಕ್ಕಿ ಉತ್ಸವ,ಕಟ್ಟೆ ಪೂಜೆ, ಮಹಾರಥೋತ್ಸವ, ಶ್ರೀ ದೇವರ ಅವಭೃತ ಸ್ನಾನ, ಜಳಕದ ಬಲಿ ಮಂಗಳವಾರ ನಡೆಯಿತು
ರಾಜ್ಯೋತ್ಸವ ಪ್ರಶಸ್ತಿ ವಿಜೇತ ವಿ.ಬಪ್ಪನಾಡು ನಾಗೇಶ್ ರವರಿಂದ ನಾಗಸ್ವರ ವಾದನ ನಡೆಯಿತು
ದೇವಸ್ಥಾನದ ಆಡಳಿತ ಮೊಕ್ತೇಸರ ಉದಯಕುಮಾರ್ ಶೆಟ್ಟಿ, ಮಾಜೀ ಮೊಕ್ತೇಸರ ಚಂದ್ರಹಾಸ ಶೆಟ್ಟಿ,ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರೂಪಾ ಭಟ್,ಶಾಂತರಾಮ ಶೆಟ್ಟಿ ತೆಂಗಾಳಿ, ಶಶಿಕಲಾ, ನಂದನ ಶೆಟ್ಟಿ, ಜಯಕರ ಶೆಟ್ಟಿ ಮುಂಬೈ, ಮೋಹನ್ ಕೋಟ್ಯಾನ್, ಸತೀಶ್ ಶೆಟ್ಟಿ, ಶ್ರೀಕಾಂತ್ ಶೆಟ್ಟಿ ಕೆಂಚನಕೆರೆ,ಮೋಹನ್ ದಾಸ್ ಶೆಟ್ಟಿ, ಉದಯಕುಮಾರ್ ಶೆಟ್ಟಿ ಅಧಿಧನ್, ಚಂದ್ರಹಾಸ ಸುವರ್ಣ, ವಿಶ್ವನಾಥ ಶೆಟ್ಟಿ, ಹರೀಶ್ ಶೆಟ್ಟಿ, ದಿನೇಶ್ಚಂದ್ರ ಅಜಿಲ,ಗೋಪಾಲ್ ಶಿಮಂತೂರು, ಯುವಕ ಮಂಡಲ ಹಾಗೂ ಮಹಿಳಾ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು