-->

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ - ಚಂದ್ರಶೇಖರ್ ನಾನಿಲ್

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ - ಚಂದ್ರಶೇಖರ್ ನಾನಿಲ್

ಮೂಲ್ಕಿ: ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಗಳ ಯು.ಕೆ.ಜಿ ವಿದ್ಯಾರ್ಥಿಗಳ ಪದವಿ ಪ್ರಧಾನ ಸಮಾರಂಭವು  ಲೀಲಾವತಿ ಜಯ ಸುವರ್ಣ ತೆರೆದ ಸಭಾಂಗಣದಲ್ಲಿ  ಶನಿವಾರದಂದು ನಡೆಯಿತು. 
   ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ  ಚಂದ್ರಶೇಖರ ನಾನಿಲ್ ಅವರು  ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು  ಮಕ್ಕಳಿಗೆ ಸಂಸ್ಕಾರಯುತವಾದ ಶಿಕ್ಷಣ ನೀಡಬೇಕು. ಮೂಲ್ಕಿಯ ಶ್ರೀ ನಾರಾಯಣಗುರು ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣವನ್ನು  ನೀಡುತ್ತಾ ಬಂದಿದೆ ಎಂದರು.

 ಶ್ರೀ ನಾರಾಯಣಗುರು ಶಿಕ್ಷಣ ಸಂಸ್ಥೆಯ ಪ್ರಾಥಮಿಕ ವಿಭಾಗದ ನಿವೃತ್ತ ಮುಖ್ಯೋಪಾಧ್ಯಾಯ  ಕೇಶವ ಎಚ್   ಮಾತನಾಡಿ ವಿದ್ಯಾರ್ಥಿಗಳ ಬದುಕಿಗೆ ಶಿಕ್ಷಣ ಒಂದೇ ಪೂರಕವಲ್ಲ, ಶಿಕ್ಷಣೇತರ ವಿಚಾರಗಳು ಬಹಳ ಮುಖ್ಯ ಎಂದರು. ಹೇಳಿದರು.

 ಕಾರ್ಯಕ್ರಮದಲ್ಲಿ  ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು  ವಿತರಿಸಲಾಯಿತು.
 ಈ ಸಂದರ್ಭ ಶ್ರೀ ನಾರಾಯಣ ಗುರು ಶಿಕ್ಷಣ  ಸಂಸ್ಥೆಯ ಸಂಚಾಲಕ  ಹರೀಂದ್ರ ಸುವರ್ಣ, ಕಾರ್ಯದರ್ಶಿ  ಬಾಲಚಂದ್ರ ಸನಿಲ್, ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಾಮನ ಕೋಟ್ಯಾನ್, ಶ್ರೀ ನಾರಾಯಣ ಗುರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ  ಶರತ್. ಆಡಳಿತ ಮಂಡಳಿ ಸದಸ್ಯರಾದ  ಯೋಗೀಶ್ ಕೋಟ್ಯಾನ್, ಅವಿನಾಶ್ ಕೋಟ್ಯಾನ್, ಪ್ರಜ್ಞ ಎ ಕೋಟ್ಯಾನ್, ಶ್ರೀ ನಾರಾಯಣಗುರು ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಮಂಜುಳಾ, ಪ್ರಾಂಶುಪಾಲ  ಯತೀಶ್ ಅಮೀನ್, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಗೀತಾ ಶೆಟ್ಟಿ, ಹಳೆ ವಿದ್ಯಾರ್ಥಿಗಳಾದ ಪ್ರತಿಕ್ಷ್ ಹಾಗೂ ವರುಣ್ ಉಪಸ್ಥಿತರಿದ್ದರು.
 ಸಂಸ್ಥೆಯ ಕಾರ್ಯದರ್ಶಿ  ಬಾಲಚಂದ್ರ ಸನಿಲ್ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ತೇಜಾಕ್ಷಿ ಧನ್ಯವಾದವಿತ್ತರು.  ವಿದ್ಯಾರ್ಥಿನಿಯರಾದ ವಂದಿತ ಹಾಗೂ ನಿರ್ವಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಪ್ರಾಥಮಿಕ ಪ್ರೌಢ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಂದ  ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು  ನಡೆಯಿತು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ