
ಶಿಮಂತೂರು: ಶ್ರೀ ದೇವರ ವಿಜೃಂಭಣೆಯ ಶಯನೋತ್ಸವ; ಭಕ್ತರಿಂದ ತುಲಾಭಾರ ಸೇವೆ
Tuesday, March 18, 2025
ಮುಲ್ಕಿ: ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ದೇವರ ಶಯನೋತ್ಸವ ಹಾಗೂ ಭಕ್ತರಿಂದ ತುಲಾಭಾರ ಸೇವೆ ವಿಜೃಂಭಣೆಯಿಂದ ನಡೆಯಿತು
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿ ಅರ್ಚಕ ಪುರುಷೋತ್ತಮ ಭಟ್ ನೇತೃತ್ವದಲ್ಲಿ ಪ್ರಾತಃಕಾಲ ವಿಶೇಷ ಪ್ರಾರ್ಥನೆ, ಕವಾಟೋದ್ಘಾಟನೆ ನಡೆದು ಭಕ್ತರಿಗೆ ಶ್ರೀ ದೇವರ ಶಯನೋತ್ಸವದ ಮಲ್ಲಿಗೆ ಪ್ರಸಾದ ವಿತರಿಸಲಾಯಿತು
ಬಳಿಕ ಭಕ್ತರಿಂದ 45ಕ್ಕೂ ಹೆಚ್ಚು ತುಲಾಭಾರ ಸೇವೆ ನಡೆಯಿತು
ಆಡಳಿತ ಮೊಕ್ತೇಸರ ಉದಯಕುಮಾರ್ ಶೆಟ್ಟಿ, ಮಾಜೀ ಮೊಕ್ತೇಸರ ಚಂದ್ರಹಾಸ ಶೆಟ್ಟಿ,ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರೂಪಾ ಭಟ್,ಶಾಂತರಾಮ ಶೆಟ್ಟಿ ತೆಂಗಾಳಿ, ಶಶಿಕಲಾ, ನಂದನ ಶೆಟ್ಟಿ, ಜಯಕರ ಶೆಟ್ಟಿ ಮುಂಬೈ, ಮೋಹನ್ ಕೋಟ್ಯಾನ್, ಸತೀಶ್ ಶೆಟ್ಟಿ, ಶ್ರೀಕಾಂತ್ ಶೆಟ್ಟಿ ಕೆಂಚನಕೆರೆ,ಮೋಹನ್ ದಾಸ್ ಶೆಟ್ಟಿ, ಉದಯಕುಮಾರ್ ಶೆಟ್ಟಿ ಅಧಿಧನ್, ಚಂದ್ರಹಾಸ ಸುವರ್ಣ, ವಿಶ್ವನಾಥ ಶೆಟ್ಟಿ, ಹರೀಶ್ ಶೆಟ್ಟಿ, ದಿನೇಶ್ಚಂದ್ರ ಅಜಿಲ,ಗೋಪಾಲ್ ಶಿಮಂತೂರು, ಮತ್ತಿತರರು ಉಪಸ್ಥಿತರಿದ್ದರು