ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಪಾಕಶಾಲೆಯ ಶಿಲಾನ್ಯಾಸ ಕಾರ್ಯಕ್ರಮ
Monday, March 31, 2025
ತೋಕೂರು : ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಪಾಕಶಾಲೆಯ ಶಿಲಾನ್ಯಾಸ ಕಾರ್ಯಕ್ರಮ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ ಹಾಗೂ ಅರ್ಚಕ ಮಧುಸೂದನ ಆಚಾರ್ಯ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಭಾನುವಾರದಂದು ನಡೆಯಿತು.ಈ ಸಂದರ್ಭ ಮಾಜೀ ಸಚಿವ ಅಭಯಚಂದ್ರ ಜೈನ್,ಧಾರ್ಮಿಕ ಪರಿಷತ್ ಸದಸ್ಯ ಸುಬ್ರಮಣ್ಯ ಭಟ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ,ಪಡುಪಣಂಬೂರು ಗ್ರಾ ಪಂ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಕಿನ್ನಿಗೋಳಿ ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗುರುರಾಜ್ ಎಸ್ ಪೂಜಾರಿ, ಮಾಜೀ ಅಧ್ಯಕ್ಷ ಹರಿದಾಸ್ ಭಟ್, ಸದಸ್ಯರಾದ ಸಂಪತ್ ಶೆಟ್ಟಿ ತೋಕೂರುಗುತ್ತು, ಪಿಸಿ ಕೋಟ್ಯಾನ್,ಸವಿತಾ ಶರತ್ ಬೆಳ್ಳಾಯರು, ಜೀರ್ಣೋದ್ಧಾರ ಸಮಿತಿ ಸದಸ್ಯರಾದ ಪುರುಷೋತ್ತಮ ರಾವ್,ತೋಕೂರು ಮದ್ದೇರಿ ದೈವಸ್ಥಾನದ ಅಧ್ಯಕ್ಷ ಪದ್ಮನಾಭ ಆಚಾರ್ಯ ,ಹಳೆಯಂಗಡಿ ಬಿಲ್ಲವ ಸಂಘದ ಅಧ್ಯಕ್ಷ ಚಂದ್ರಶೇಖರ್ ನಾಣಿಲ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್
ಉದ್ಯಮಿ ಪೃಥ್ವಿರಾಜ ಆಚಾರ್ಯ ಕಿನ್ನಿಗೋಳಿ ಮತ್ತಿತರರು ಉಪಸ್ಥಿತರಿದ್ದರು.
ಗುರುರಾಜ್ ಎಸ್ ಪೂಜಾರಿ ಸ್ವಾಗತಿಸಿದರು. ಹೇಮನಾಥ ಅಮೀನ್ ನಿರೂಪಿಸಿದರು.