ಕಿನ್ನಿಗೋಳಿಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಷನ್ ನ ನೂತನ ಘಟಕದ ಉದ್ಘಾಟನೆ , ಅಮಂತ್ರಣ ಪತ್ರಿಕೆ ಬಿಡುಗಡೆ
Wednesday, April 23, 2025
ಮೂಲ್ಕಿ; ಕಳೆದ 10 ವರ್ಷಗಳಲ್ಲಿ ಪಟ್ಲ ಫೌಂಡೇಷನ್ ಸಾಮಾಜಿಕ ಕಳಕಳಿಯೊಂದಿಗೆ ಗಮನಾರ್ಹ ಸಾಧನೆ ಮಾಡಿದೆ ಎಂದು ಯಕ್ಷದ್ರುವ ಪಟ್ಲ ಪೌಂಡೇಷನ್ ನ ಗೌರವಾಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು ಅವರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬಪ್ಪನಾಡಿನಲ್ಲಿ
ಯಕ್ಷದ್ರುವ ಪಟ್ಲ ಪೌಂಡೇಷನ್ ಕಿನ್ನಿಗೋಳಿ ನೂತನ ಘಟಕದ ಉದ್ಘಾಟನಾ ಸಮಾರಂಭದ ಅಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ಫೌಂಡೇಶನ್ ಬಡ ಕಲಾವಿದರಿಗೆ ಸೂರು ಕಲ್ಪಿಸಿ, ಅಶಕ್ತರ ಆಶಾಕಿರಣವಾಗಿದೆ, ದಾನಿಗಳು ತಮ್ಮ ಸಂಪಾದನೆಯ ಒಂದಂಶವನ್ನು ಪೌಂಡೇಷನ್ ಗೆ ನೀಡಿ ಸಹಕರಿಸುತ್ತಿದ್ದು ಸದ್ಯ ಫೌಂಡೇಷನ್ ಜಗತ್ತಿನಲ್ಲೇ ಪ್ರತಿಷ್ಠಿತ ಸಂಸ್ಥೆಯಾಗಿದೆ, ಮೇ 9 ನೇ ತಾರೀಖಿನಂದು ಸಂಸ್ಥೆಯ ಕಿನ್ನಿಗೋಳಿ ಘಟಕದ ಉದ್ಘಾಟನೆ ನಡೆಯಲಿದ್ದು ಎಲ್ಲರೂ ಆಗಮಿಸುವಂತೆ ಮನವಿ ಮಾಡಿದರು.
ಅರ್ಚಕ ಗೋಪಾಲಕೃಷ್ಣ ಉಪಾಧ್ಯಾಯ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭ ಸಂಸ್ಥೆಯ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಕಿನ್ನಿಗೋಳಿ ಘಟಕದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಕಾರ್ಯದರ್ಶಿ ದಿವಾಕರ ಕರ್ಕೇರ, ಕೋಶಾಧಿಕಾರಿ ಸ್ವರಾಜ್ ಶೆಟ್ಟಿ, ಯುಗಪುರುಷದ ಭುವನಾಭಿರಾಮ ಉಡುಪ, ಪೃಥ್ವಿರಾಜ ಆಚಾರ್ಯ ಕಿನ್ನಿಗೋಳಿ, ಪುಷ್ಪರಾಜ ಚೌಟ, ದಿವಾಕರ ಕರ್ಕೆರ , ಶರತ್ ಶೆಟ್ಟಿ,ನಿಶಾಂತ್ ಶೆಟ್ಟಿ ಕಿಲೆಂಜೂರು, ದೇವಿಪ್ರಸಾದ ಶೆಟ್ಟಿ ದೇವಸ್ಯ
ಮತ್ತಿತರರು ಉಪಸ್ಥಿತರಿದ್ದರು.