-->
ಮಕ್ಕಳಿಗೆ ಹೊಸ ಜ್ಞಾನ ಮತ್ತು ಕೌಶಲ್ಯಗಳ ಬೆಳವಣಿಗೆಗೆ ಪೂರಕ - ಲಕ್ಷ್ಮೀನಾರಾಯಣ ಆಸ್ರಣ್ಣ

ಮಕ್ಕಳಿಗೆ ಹೊಸ ಜ್ಞಾನ ಮತ್ತು ಕೌಶಲ್ಯಗಳ ಬೆಳವಣಿಗೆಗೆ ಪೂರಕ - ಲಕ್ಷ್ಮೀನಾರಾಯಣ ಆಸ್ರಣ್ಣ

ಮೂಲ್ಕಿ:ಮಕ್ಕಳಲ್ಲಿ ವೈಯಕ್ತಿಕ ಮತ್ತು ಶೈಕ್ಷಣಿಕ ಬೆಳವಣಿಗೆಯನ್ನು ಉತ್ತೇಜಿಸಲು ವಿವಿಧ ತರಬೇತಿಯನ್ನು ನೀಡುವ ಮೂಲಕ  ಕಳೆದ ಎಂಟು ವರುಷದಿಂದ ಮಕ್ಕಳಿಗೆ ವ್ಯಕ್ತಿತ್ವ ಬೆಳವಣಿಗೆಯನ್ನು ಪೂರೈಸಲು ಅವಕಾಶ ನೀಡುತ್ತಿರುವ ಪುನರೂರು ಪ್ರತಿಷ್ಠಾನದ ಕಾರ್ಯ ಶ್ಲಾಘನೀಯ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅನುವಂಶಿಕ ಅರ್ಚಕ ರಾದ ಲಕ್ಷ್ಮೀನಾರಾಯಣ ಆಸ್ರಣ್ಣ ಅವರು ಹೇಳಿದರು.ಅವರು  ಪುನರೂರು ಪ್ರತಿಷ್ಠಾನದ ಆಶ್ರಯದಲ್ಲಿ ಹಾಗೂ ಜನ ವಿಕಾಸ ಸಮಿತಿ ಮೂಲ್ಕಿ ಸಹಕಾರದಲ್ಲಿ ಮಕ್ಕಳ ಬೌದ್ಧಿಕ ಬೆಳವಣಿಗೆಗಾಗಿ ಪುನರೂರು ಶ್ರೀ ವಿಶ್ವನಾಥ ದೇವಳದ ಸಭಾಂಗಣದಲ್ಲಿ ಉಚಿತವಾಗಿ ಆಯೋಜಿಸಿದ  ಬಾಲ ವಿಕಾಸ ಶಿಬಿರ -2025 ನ್ನು ಉದ್ಘಾಟಿಸಿ ಮಾತನಾಡಿದರು.
 ಪುನರೂರು ಪ್ರತಿಷ್ಠಾನದ ಗೌರವ ಅಧ್ಯಕ್ಷ  ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅವರು ಕಾರ್ಯಕ್ರಮದ  ಅಧ್ಯಕ್ಷತೆಯನ್ನು  ವಹಿಸಿದ್ದರು. 

ಈ ಸಂದರ್ಭ  ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ  ದಯಾನಂದ ಹೆಜಮಾಡಿ, ಕಿನ್ನಿಗೋಳಿ ಯುಗಪುರುಷದ ಪ್ರಧಾನ ಸಂಪಾದಕ  ಕೊಡೆತ್ತೂರು ಭುವನಾಭಿರಾಮ ಉಡುಪ, ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷೆ ಎಚ್.ಕೆ.ಉಷಾರಾಣಿ, ಪ್ರಧಾನ ಕಾರ್ಯದರ್ಶಿ ಶ್ರೇಯಾ ಪುನರೂರು, ಜನವಿಕಾಸ ಸಮಿತಿ ಮೂಲ್ಕಿಯ ಅಧ್ಯಕ್ಷೆ ಅಕ್ಷತಾ ಶೆಟ್ಟಿ ಪದಾಧಿಕಾರಿಗಳಾದ ಗೀತಾ ಶೆಟ್ಟಿ, ಶೋಭಾ ರಾವ್, ಜೀವನ್ ಶೆಟ್ಟಿ ಅಂಗರಗುಡ್ಡೆ, ಆನಂದ ಮೇಲಾಂಟ, ಶಶಿಕರ ಕೆರೆಕಾಡು ಉಪಸ್ಥಿತರಿದ್ದರು.

ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಪ್ರಾಸ್ತಾವಿಕವಾಗಿ ಮಾತಾಡಿ ಅತಿಥಿಗಳನ್ನು ಸ್ವಾಗತಿಸಿದರು. ಪ್ರಾಣೇಶ್ ಭಟ್ ದೇಂದಡ್ಕ ಕಾರ್ಯಕ್ರಮ ನಿರೂಪಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ