ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಜಪೆಯ ಜ್ಞಾನ ವಿಕಾಸ ವಿಭಾಗದಿಂದ ವಾತ್ಸಲ್ಯ ಮನೆ ಹಸ್ತಾಂತರ
Wednesday, April 9, 2025
ಮೂಲ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಜಪೆಯ ಜ್ಞಾನ ವಿಕಾಸ ವಿಭಾಗದಿಂದ ನಿರ್ಗತಿಕರ ಮಾಸಾಶನ ಅಡಿಯಲ್ಲಿ ಮೂಲ್ಕಿಯ ಕಕ್ವ ಮಟ್ಟು ಗ್ರಾಮ ದ ವಿಮಲಾ ಎಂಬವರಿಗೆ ವಾತ್ಸಲ್ಯ ಮನೆಯನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭ ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೆಗೌಡ , ಅರಸು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಗೌತಮ್ ಜೈನ್ , ಜನ ಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಭುವನಾಭಿರಾಮ ಉಡುಪ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ವಿನೋದ್ ಬೆಳ್ಳಾಯಾರು ಗ್ರಾಮಪಂಚಾಯತ್ ಅಧ್ಯಕ್ಷ ಶಶಿಕಲಾ ,ಉಪಾಧ್ಯಕ್ಷ ಮನೋಹರ್ ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್ ಪ್ರಿಯದರ್ಶಿನಿ ಕೋ. ಅಪರೇಟಿವ್ ಬ್ಯಾಂಕ್ ನ ಅಧ್ಯಕ್ಷ ವಸಂತ ಬೆರ್ನಾಡ್, ಯೋಜನಾಧಿಕಾರಿ ಗಿರೀಶ್ ಕುಮಾರ್,ಕೇಂದ್ರ ಒಕ್ಕೂಟ ಹಾಲಿ ಹಾಗೂ ಮಾಜಿಅಧ್ಯಕ್ಷರುಗಳು ಸ್ಥಳೀಯ ಒಕ್ಕೂಟದ ಅಧ್ಯಕ್ಷರಗಳು, ಯೋಜನಾಧಿಕಾರಿಗಳು,ಜ್ಞಾನ ವಿಕಾಸ ಸಮನ್ವಯಧಿಕಾರಿ, ವಲಯ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.