Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಉಗ್ರರ ನೆಲೆಗಳ ಮೇಲೆ ಭಾರತ ದಾಳಿ ಹಿನ್ನೆಲೆ- ವಿಮಾನ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಮಂಗಳೂರು: ಪಾಕ್ ಉಗ್ರರ ನೆಲೆಗಳ ಮೇಲೆ ಭಾರತೀಯ ವಾಯು ಸೇನಾ ದಾಳಿ ಹಿನ್ನೆಲೆಯಲ್ಲಿ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ ಎಂದು ಮಂಗಳೂರು ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ.

ಕೆಲವು ವಾಯು ಮಾರ್ಗಗಳಲ್ಲಿ ವಿಮಾನಗಳ ಸಂಚಾರಕ್ಕೆ ನಿರ್ಬಂಧ ಇರುವುದರಿಂದ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಈ ಬಗ್ಗೆ ಪ್ರಯಾಣಿಕರಿಗೆ ಕೆಲ ಸೂಚನೆಗಳನ್ನು ನೀಡಿದೆ. ವಿಮಾನ ಪ್ರಯಾಣ ಮಾಡುವ ಪ್ರಯಾಣಿಕರು ಏರ್‌ಲೈನ್‌ಗಳೊಂದಿಗೆ ಪರಿಶೀಲಿಸಿ ತಮ್ಮ ವಿಮಾನ ಪ್ರಯಾಣದ ಮಾಹಿತಿ ಖಚಿತಪಡಿಸಿಕೊಳ್ಳಿ ಎಂದು ಮಂಗಳೂರು ವಿಮಾನ ನಿಲ್ದಾಣದ ಆಡಳಿತ ವಿಭಾಗ ತಿಳಿಸಿದೆ.

ಭಾರತದಾದ್ಯಂತ ಗೃಹ ವ್ಯವಹಾರಗಳ ಸಚಿವಾಲಯ ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ತುರ್ತು ವಿಮಾನ ನಿಲ್ದಾಣ ಸ್ಥಳಾಂತರಿಸುವ ಅಣಕು ಡ್ರಿಲ್ ಅನ್ನು ನಡೆಸಿತು. ವಿಮಾನ ನಿಲ್ದಾಣದ ತುರ್ತು ಕಾರ್ಯಾಚರಣೆ ಯೋಜನೆಯ ಪ್ರಕಾರ ಈ ಡ್ರಿಲ್ ಅನ್ನು ನಡೆಸಲಾಯಿತು. ವಿಮಾನ ನಿಲ್ದಾಣದ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರದೆ, ಎಲ್ಲಾ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಒಳಗೊಂಡಿರುವ ಸಮರಾಭ್ಯಾಸವನ್ನು ಸಿಐಎಸ್‌ಎಫ್‌ ನಡೆಸಿತು.