-->
ಮೇ 30: ಸೂರ್ಯನಾರಾಯಣ ದೇವರ ಗರ್ಭಗುಡಿಯ ಶಿಲಾನ್ಯಾಸ ಸಮಾರಂಭ: ಆಮಂತ್ರಣ ಪತ್ರ ಬಿಡುಗಡೆ

ಮೇ 30: ಸೂರ್ಯನಾರಾಯಣ ದೇವರ ಗರ್ಭಗುಡಿಯ ಶಿಲಾನ್ಯಾಸ ಸಮಾರಂಭ: ಆಮಂತ್ರಣ ಪತ್ರ ಬಿಡುಗಡೆ

ಮಂಗಳೂರು: ಗಂಜಿಮಠ  ಗ್ರಾ.ಪಂ  ವ್ಯಾಪ್ತಿಯ ಮಳಲಿ(ಮಣೇಲ್) ಸೂರ್ಯನಾರಾಯಣ ದೇವಸ್ಥಾನಕ್ಕೆ ಮೇ 30ರಂದು ನಡೆಯಲಿರುವ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಶುಕ್ರವಾರ ದಂದು ಶ್ರೀಕ್ಷೇತ್ರದಲ್ಲಿ ರಮೇಶ್ ಆಚಾರ್ಯ ನಾರಳ ಬಿಡುಗಡೆಗೊಳಿಸಿದರು. 
ಮೇ 30 ರಂದು ಶುಕ್ರವಾರ ಪೂರ್ವಾಹ್ನ ಗಂಟೆ 8-23ಕ್ಕೆ ನಡೆಯುವ ಮಿಥುನ ಲಗ್ನದಲ್ಲಿ ಶ್ರೀ ಸೂರ್ಯನಾರಾಯಣ ದೇವರ ನೂತನ ಗರ್ಭಗುಡಿಯ ಶಿಲಾನ್ಯಾಸ ಸಮಾರಂಭ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಯವರ ನೇತೃತ್ವದಲ್ಲಿ, ಶ್ರೀಕ್ಷೇತ್ರ ವಜ್ರದೇಹಿ ಮಠ ಗುರುಪುರದ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅಮೃತ ಹಸ್ತದಿಂದ ನೆರವೇರಲಿದೆ. ಸಮಾರಂಭದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಡಾ| ವೈ. ಭರತ್ ಶೆಟ್ಟಿ, ರಾಜೇಶ್ ನಾಯ್ಕ,  ಗಂಜಿಮಠ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲತಿ ಮತ್ತಿತರರು  ಭಾಗವಹಿಸಲಿದ್ದಾರೆ. ಶ್ರೀ ದೇವರ ಸಾನಿಧ್ಯ ವೃದ್ಧಿಗಾಗಿ ಮೇ 26ರಿಂದ 29ರ ವರೆಗೆ ಐದು ದಿನಗಳ ಕಾಲ ಸಂಧ್ಯಾ ಭಜನಾ, ಮರುದಿನ ಮೇ 30 ರಂದು ಪ್ರಾತಃಕಾಲ ಭಜನಾ ಸೇವೆ ನಡೆಯಲಿದೆ.
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಭಾಸ್ಕರ ಕುಲಾಲ್ ಕೀಲಾಡಿ, ಸಂಚಾಲಕ ಭಾಸ್ಕರ ಭಟ್, ಕಾರ್ಯದರ್ಶಿ ಶಿವರಾಜ್ ನಾರಳ, ಜಯರಾಮ್ ಶೆಟ್ಟಿ ಸಂಕೇಶಗುತ್ತು, ರಾಮಚಂದ್ರ ಅತಿಕಾರಿಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ