-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಎಕ್ಕಾರಿನಲ್ಲಿ ಮಕ್ಕಳ ಬೇಸಿಗೆ ಶಿಬಿರ

ಎಕ್ಕಾರಿನಲ್ಲಿ ಮಕ್ಕಳ ಬೇಸಿಗೆ ಶಿಬಿರ

ಬಜಪೆ:ಗ್ರಾಮೀಣ ಭಾಗದ  ಮಕ್ಕಳಿಗಾಗಿ ಆಯೋಜನೆಗೊಂಡ ಬೇಸಿಗೆ ಶಿಬಿರವು ಮಕ್ಕಳ ಸಮಗ್ರ ಬೆಳವಣಿಗೆಗೆ ಸಹಕಾರಿ ಎಂದು ಎಕ್ಕಾರು ಗ್ರಾಮ ಪಂಚಾಯತ್ ನ ಅಧ್ಯಕ್ಷ ಪ್ರವೀಣ್ ಆಚಾರ್ಯ ಹೇಳಿದರು.ಅವರು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ  ಎಕ್ಕಾರು ಗ್ರಾಮಪಂಚಾಯತ್ ನ ಅರಿವು ಕೇಂದ್ರದಲ್ಲಿ  ಆಯೋಜನೆಗೊಂಡಿದ್ದ ಮಕ್ಕಳ ಬೇಸಿಗೆ ಶಿಬಿರವನ್ನು ದೀಪ ಪ್ರಜ್ವಲನೆಗೊಳಿಸಿ ಉದ್ಘಾಟಿಸಿ  ಮಾತನಾಡಿದರು.ಶಿಬಿರದಲ್ಲಿ ನೈತಿಕ ಶಿಕ್ಷಣ,ಅಂಚೆ ಇಲಾಖೆ,ಪಂಚಾಯತ್ ,ಶಿಸ್ತು,ಸಮಯ ಪ್ರಜ್ಞೆ ಇನ್ನಿತರ ವಿಷಯಗಳ ಬಗ್ಗೆ ಮಾಹಿತಿಗಳನ್ನು ನೀಡಲಾಯಿತು.ಅಲ್ಲದೆ  ಡ್ರಾಯಿಂಗ್,ಪೈಂಟಿಂಗ್,ಹಾಡುಗಾರಿಕೆ ಸಹಿತ ವಿವಿಧಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಎಕ್ಕಾರು ಗ್ರಾಮ ಪಂಚಾಯತ್ ನ ಅಭಿವೃದ್ದಿ ಅಧಿಕಾರಿ ರಾಜೇಂದ್ರ ಶೆಟ್ಟಿ ಅವರು ಪ್ರಾಸ್ತವಿಕವಾಗಿ ಮಾತನಾಡಿದರು.
ನಿವೃತ್ತ ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಇಂದಿರಾ,ಶಿಕ್ಷಕರಾದ ಶ್ರೀಮತಿ ದೀಪಿಕಾ ಆಚಾರ್ಯ,ಸ್ವಸ್ತಿಕ್ ಆಚಾರ್ಯ  ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿಗಳನ್ನು ನೀಡಿದರು.ಶಿಬಿರದಲ್ಲಿ  ಒಟ್ಟು 46 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಸಂದರ್ಭ  ಎಕ್ಕಾರು ಗ್ರಾಮ ಪಂಚಾಯತ್  ಅಧ್ಯಕ್ಷ ಪ್ರವೀಣ್ ಆಚಾರ್ಯ,ಅಭಿವೃದ್ದಿ ಅಧಿಕಾರಿ ರಾಜೇಂದ್ರ  ಶೆಟ್ಟಿ,ಕಾರ್ಯದರ್ಶಿ ಕಮಲಾಕ್ಷ,ಗ್ರಂಥಪಾಲಕಿ ಶ್ರೀಮತಿ ಹೇಮಲತಾ ಜೆ ಶರ್ಮಾ, ಶ್ರೀಮತಿ ಸವಿತಾ,ಶ್ರೀಮತಿ ಸಂಧ್ಯಾ,ಶ್ರೀಮತಿ ರೇಷ್ಮಾ,ಶ್ರೀಮತಿ ಅಮೃತಕಲಾ,ಕು.ಜಯಲಕ್ಷ್ಮೀ ,ಎಕ್ಕಾರು ಗ್ರಾಮ ಪಂಚಾಯತ್ ನ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ