ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ.) ಕಾಸರಗೋಡು ಇದರ ನೂತನಗೌರವ ಸಲಹೆಗಾರರಾಗಿ ದೀಪಕ್ ಪೆರ್ಮುದೆ ಆಯ್ಕೆ
Thursday, June 26, 2025
ಗೌರವ ಸಲಹೆಗಾರರಾಗಿ ಮಂಗಳೂರಿನ ಕಲಾ, ಸಾಹಿತ್ಯ, ಸಾಂಸ್ಕೃತಿಕ ಸಂಘಟಕ ದೀಪಕ್ ಪೆರ್ಮುದೆ, ಮಂಗಳೂರು ಇವರನ್ನು ಸಮಿತಿಯು ಸರ್ವಾನುಮತದಿಂದ ಆಯ್ಕೆಗೊಳಿಸಿದೆ.ದೀಪಕ್ ಪೆರ್ಮುದೆ ಅವರು ಮಂಗಳೂರು ಪರಿಸರದ ವಿವಿಧ ಸಂಘ -ಸಂಸ್ಥೆ, ಸಂಘಟನೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು, ಪೆರ್ಮುದೆ ಗ್ರಾ.ಪಂ ನ ಮಾಜಿ ಸದಸ್ಯರಾಗಿ,
ಪೆರ್ಮುದೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾಗಿ,ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಚೇಳ್ಯಾರು - ಮದ್ಯ - ಕೊಡಿಪಾಡಿ, ಮಂಗಳೂರು ಇದರ ಮಾಜಿ ಅಧ್ಯಕ್ಷರಾಗಿ,
ಲಯನ್ಸ್ ಕ್ಲಬ್ ಕಾಟಿಪಳ್ಳ - ಕೃಷ್ಣಾಪುರದ ಮಾಜಿ ಅಧ್ಯಕ್ಷರಾಗಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿಯಾಗಿ,ಕನ್ನಡ ಸಾಹಿತ್ಯ ಪರಿಷತ್ , ಬೆಂಗಳೂರು ಇದರ ಸದಸ್ಯರಾಗಿ,ಶ್ರೀ ಶಾರದಾ ಯಕ್ಷಗಾನ ಮಂಡಳಿ, ಪೆರ್ಮುದೆ ಇದರ ಉಪಾಧ್ಯಕ್ಷರಾಗಿ ,ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತ ಬಂದಿದ್ದಾರೆ.