ಕಾರ್ನಾಡ್ ಶ್ರೀ ಹರಿಹರ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ
Thursday, June 12, 2025
ಮೂಲ್ಕಿ:ಕಾರ್ನಾಡ್ ಶ್ರೀ ಹರಿಹರ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೃಢ ಕಲಶಾಭಿಷೇಕವು ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ ಹಾಗೂ ಅರ್ಚಕ ಹಯಗ್ರೀವ ಪಡ್ಡಿಲ್ಲಾಯ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭ ಕ್ಷೇತ್ರದ ಆಡಳಿತ ಮೊಕೇಸರ ಎಂ.ಎಚ್.ಅರವಿಂದ ಪೂಂಜ, ಜೀರ್ಣೋದ್ದಾರ ಸಮಿತಿಯ ಸುನಿಲ್ ಆಳ್ವ, ವೈ.ಎನ್. ಸಾಲ್ಯಾನ್, ಹರ್ಷರಾಜ ಶೆಟ್ಟಿ, ಮಧು ಆಚಾರ್ಯ,ಸುರೇಶ್ ರಾವ್, ಜೀವನ್ ಶೆಟ್ಟಿ,ಕೃಷ್ಣ ಶೆಟ್ಟಿ,ಪ್ರವೀಣ್ ಕೋಟ್ಯಾನ್,ಕೃಷ್ಣದೇವಾಡಿಗ, ದಿವಾಕರ ಕೋಟ್ಯಾನ್, ಕಿಶೋರ್ ಹರಿಹರ,ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶಶೀಂದ್ರ ಸಾಲ್ಯಾನ್, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ರಂಗನಾಥ ಶೆಟ್ಟಿ, ಶಿವರಾಮ್ ಜಿ ಅಮೀನ್, ವಿಷ್ಣುಮೂರ್ತಿ ಮತ್ತಿತರರು ಇದ್ದರು.