ತೆಂಕು ಬಡಗಿನ ಖ್ಯಾತ ಯಕ್ಷಗಾನ ಹಾಸ್ಯಗಾರ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ, ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ತೀವ್ರ ಸಂತಾಪ
Sunday, June 22, 2025
ಮುಲ್ಕಿ:ತೆಂಕು ಬಡಗಿನ ಖ್ಯಾತ ಯಕ್ಷಗಾನ ಹಾಸ್ಯಗಾರ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ರವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
ಅವರು ಮಾಧ್ಯಮದ ಜೊತೆ ಮಾತನಾಡಿ ಕಳೆದ ಹಲವಾರು ವರ್ಷಗಳಿಂದ ತೆಂಕು-ಬಡಗು ಯಕ್ಷಗಾನ ಕ್ಷೇತ್ರದಲ್ಲಿ ಸಾಧಕ ಕಲಾವಿದರಾಗಿ ಯಕ್ಷಗಾನ ಕ್ಷೇತ್ರಕ್ಕೆ ಅವರ ಕೊಡುಗೆ ಅನನ್ಯವಾಗಿದ್ದು ಅವರ ಸಾಧನೆಗಳನ್ನು ಗುರುತಿಸಿ ಸರಕಾರ ಗೌರವಿಸಿದ್ದು ಯಕ್ಷಗಾನಕ್ಕೆ ಮತ್ತಷ್ಟು ಹಿರಿಮೆ ತಂದಿದೆ ಎಂದರು
ಖ್ಯಾತ ಯಕ್ಷಗಾನ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ ಜೈನ್,ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್, ದಕ ಪದ್ಮಶಾಲಿ ಸಭಾದ ಮಾಜೀ ಅಧ್ಯಕ್ಷ ಪುರಂದರ ಶೆಟ್ಟಿಗಾರ, ಅನಂತ ಪ್ರಕಾಶನ ಸಂಸ್ಥೆಯ ಸಚ್ಚಿದಾನಂದ ಉಡುಪ ಕಿನ್ನಿಗೋಳಿ,
ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಬಿಲ್ಲವ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್,ಕಿನ್ನಿಗೋಳಿ ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬೆರ್ನಾಡ್, ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್,ಮಾಜೀ ಅಧ್ಯಕ್ಷ ಸುನಿಲ್ ಆಳ್ವ,ಸದಸ್ಯರಾದ ಹರ್ಷರಾಜ ಶೆಟ್ಟಿಕಿನ್ನಿಗೋಳಿ ಗ್ರಾ.ಪಂ ಮಾಜಿ ಅಧ್ಯಕ್ಷ ದೇವಪ್ರಸಾದ್ ಪುನರೂರು, ಮಾಜೀ ಸದಸ್ಯರಾದ ಸಂತೋಷ್ ಕುಮಾರ್, ಚಂದ್ರಶೇಖರ್ ಗೋಳಿ ಜೋರಾ,ಮಾಜೀ ಧಾರ್ಮಿಕ ಪರಿಷತ್ ಸದಸ್ಯ ಗಿರಿ ಪ್ರಕಾಶ್ ತಂತ್ರಿ ಪೊಳಲಿ, ಪ್ರಕಾಶ್ ಆಚಾರ್ಯ ಕಿನ್ನಿಗೋಳಿ, ಸಾಮಾಜಿಕ ಕಾರ್ಯಕರ್ತರಾದ ಶರತ್ ಕಾರ್ನಾಡ್, ಪ್ರಾಣೇಶ್ ಹೆಜ್ಮಾಡಿ, ಧರ್ಮಾನಂದ ಶೆಟ್ಟಿಗಾರ್ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ