ಮುಲ್ಕಿ: ಪಡಿತರ ಅಕ್ಕಿ ಜೊತೆಗೆ ಇಂದಿರಾ ಕಿಟ್ ನೀಡುವ ರಾಜ್ಯದ ಕಾಂಗ್ರೆಸ್ ಆಡಳಿತದ ಸಿದ್ದರಾಮಯ್ಯ ನೇತೃತ್ವದ ಸರಕಾರದ ನಿರ್ಧಾರವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ವಸಂತ್ ಬೆರ್ನಾಡ್ ಸ್ವಾಗತಿಸಿದ್ದಾರ. ಅವರು ಮಾಧ್ಯಮದ ಜೊತೆ ಮಾತನಾಡಿ ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಜನರಿಗೆ ಚುನಾವಣಾ ಸಮಯದಲ್ಲಿ ಕೊಟ್ಟ ಭರವಸೆಗಳಂತೆ ಅನೇಕ ಭಾಗ್ಯ ಗಳನ್ನು ನೀಡಿದ್ದು ಜನಪ್ರಿಯತೆ ಗಳಿಸಿದೆ. ಇದೀಗ ಪಡಿತರ ಅಕ್ಕಿ ಇಂದಿರಾ ಕಿಟ್ ನೀಡುವ ಸರಕಾರದ ಕಾರ್ಯಕ್ರಮ ಸ್ವಾಗತಾರ್ಹವಾಗಿದ್ದು ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಅನುಕೂಲವಾಗಲಿದೆ ಎಂದರು.
ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದಲ್ಲಿ ಮಾಜೀ ಸಚಿವ ಕೆ ಅಭಯ ಚಂದ್ರ ಜೈನ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಮಿಥುನ್ ರೈ ನೇತೃತ್ವದಲ್ಲಿ ಕರ್ನಾಟಕ ಸರಕಾರದ ಜನಪ್ರಿಯ ಯೋಜನೆಗಳನ್ನು ಮನೆಮನೆಗೆ ತಲುಪಿಸಲು ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿಕೊಂಡಿದ್ದು ಫಲಕಾರಿಯಾಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಪಕ್ಷದ ಸಂಘಟನೆ ಜೊತೆಗೆ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಮುನ್ನಡೆಯಲಿದೆ ಎಂದರು.