ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ಜೀರ್ಣೋದ್ದಾರ,ಶ್ರೀದೇವರ ನೂತನ ಶಿಲಾಮಯ ಗರ್ಭ ಗುಡಿಯ ಶಿಲಾನ್ಯಾಸ
Saturday, June 14, 2025
ಕಿನ್ನಿಗೋಳಿ :ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಸಮಗ್ರ ಜೀರ್ಣೋದ್ದಾರದ ಅಂಗವಾಗಿ ಶುಕ್ರವಾರದಂದು ಬೆಳಿಗ್ಗೆ ಶ್ರೀ ದೇವರ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ ಸಮಾರಂಭವು ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ದಿವ್ಯ ಹಸ್ತದಲ್ಲಿ ಹಾಗೂ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಕಳತ್ತೂರು ಕರುಣಾಕರ ತಂತ್ರಿ ನೇತೃತ್ವದಲ್ಲಿ ವಿವಿಧ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಈ ಸಂದರ್ಭ ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ಕ್ಷೇತ್ರದ ಅರ್ಚಕ ಶಶಾಂಕ್ ಮುಚ್ಚಿಂತಾಯ, ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ, ವಾಸ್ತು ತಜ್ಞ ಗುಂಡಿಬೈಲು ಸುಬ್ರಹ್ಮಣ್ಯ ಭಟ್,ಕೃಷ್ಣಮೂರ್ತಿ ಆಚಾರ್ಯ, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉದ್ಯಮಿ ಪೃಥ್ವಿ ರಾಜ ಆಚಾರ್ಯ ಕಿನ್ನಿಗೋಳಿ, ಪಟೇಲ್ ರಾಮಮೂರ್ತಿ ರಾವ್, ಕ್ಷೇತ್ರದ ಆಡಳಿತ ಮೊಕೇಸರ ಪಟೇಲ್ ವಾಸುದೇವ ರಾವ್, ಜಗನ್ನಾಥ ರಾವ್ ಪಡುಬಿದ್ರೆ, ಕಸ್ತೂರಿ ಪಂಜ, ಗುರುರಾಜ್ ಎಸ್ ಪೂಜಾರಿ ತೋಕೂರು, ಜೀರ್ಣೋದ್ದಾರ ಸಮಿತಿಯ ಭುವನಾಭಿರಾಮ ಉಡುಪ, ಸುಧಾಕರ್ ರಾವ್, ದೇವಪ್ರಸಾದ್ ಪುನರೂರು, ಪಟೇಲ್ ವಿಶ್ವನಾಥ ರಾವ್, ಗೋಪಿನಾಥ ರಾವ್, ಪುರಂದರ ಶೆಟ್ಟಿಗಾರ್, ನವೀನ್ ಶೆಟ್ಟಿ ಪುನರೂರುಗುತ್ತು,ರವಿ ಶೆಟ್ಟಿ, ಧನಂಜಯ ಶೆಟ್ಟಿಗಾರ್, ಪಕ್ಷಿಕೆರೆ, ಸುರೇಶ್ ರಾವ್ ನೀರಳಿಕೆ, ರಮೇಶ್ ರಾವ್ ಮೂಡುಮನೆ ಚಂದ್ರಶೇಖರರಾವ್ ಎಕ್ಕೋಡಿ ಮತ್ತಿತರರು ಉಪಸ್ಥಿತರಿದ್ದರು.ಮಧ್ಯಾಹ್ನ ಅನ್ನಸಂತರ್ಪಣೆಯು ನಡೆಯಿತು.