Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಮಳೆ ಅನಾಹುತ,ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪರಿಶೀಲನೆ

ಮಂಗಳೂರು  : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಪಚ್ಚನಾಡಿ ಶಿವಾಜಿನಗರ ಪ್ರದೇಶದ ಸುಜಾತ ಅವರ ಮನೆ  ಸಂಪೂರ್ಣ ಹಾನಿಗೊಂಡಿದ್ದು ಸ್ಥಳಕ್ಕೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ನಿರಾಶ್ರೀತ ಸುಜಾತಾ ಅವರ ಕುಟುಂಬಕ್ಕೆ ಶಾಸಕರು ತಮ್ಮ ವೈಯುಕ್ತಿಕ ನೆಲೆಯಲ್ಲಿ ಬಾಡಿಗೆ ಮನೆಯ ವ್ಯವಸ್ಥೆ ಮಾಡಿಸಿ ಆಶ್ರಯ ಕಲ್ಪಿಸಿದರು. ಅದೇ ರೀತಿ ಶೀಘ್ರದಲ್ಲಿ ಸಮಸ್ಯೆ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭ, ಮಂಗಳೂರು ಮಹಾ ನಗರ ಪಾಲಿಕೆಯ ನಿಕಟಪೂರ್ವ ಕಾರ್ಪೊರೇಟರ್ ಸಂಗೀತಾ ಆರ್ ನಾಯಕ್, ಕಂದಾಯ ಇಲಾಖೆಯ ಅಧಿಕಾರಿಗಳು, ಸಂದೀಪ್ ಪಚ್ಚನಾಡಿ, ಪಚ್ಚನಾಡಿ ಬಿಜೆಪಿಯ ವಾರ್ಡ್ ಅಧ್ಯಕ್ಷ ಶಿವಾಜಿ ಕುಲಾಲ್ ಉಪಸ್ಥಿತರಿದ್ದರು.