ವ್ಯಕ್ತಿ ನಾಪತ್ತೆ
Wednesday, July 9, 2025
ಮಂಗಳೂರು :ಕಟೀಲು ಕೊಂಡೆಮೂಲ ನರ್ತಿಕಲ್ಲು ನಿವಾಸಿ ವಿಶ್ವನಾಥ (56) ಅವರು ಮನೆಯಿಂದ ಬಜಪೆಗೆ ಕೆಲಸಕ್ಕೆಂದು ಹೋದವರು ನಾಪತ್ತೆಯಾಗಿದ್ದಾರೆ.
ಜು. 4ರಂದು ಬೆಳಗ್ಗೆ 8.30ಕ್ಕೆ ಮನೆಯಿಂದ ಹೋಗಿದ್ದು, ಮಧ್ಯಾಹ್ನ 2 ಗಂಟೆಗೆ ಪತ್ನಿ ಕರೆ ಮಾಡಿದಾಗ ಸ್ವೀಕರಿಸಿರಲಿಲ್ಲ. ಬಳಿಕ ಎಲ್ಲ ಕಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಸುಮಾರು 5 ಅಡಿ ಎತ್ತರ, ಗೋಧಿ ಮೈ ಬಣ್ಣದ ಅವರು ತುಳು ಭಾಷೆ ಬಲ್ಲವರಾಗಿದ್ದು, ಮನೆಯಿಂದ ಹೊರಡುವಾಗ ಬಿಳಿ ಬಣ್ಣದ ಅರ್ಧ ತೋಳಿನ ಅಂಗಿ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು. ಈ ಚಹರೆಯ ವ್ಯಕ್ತಿಯ ಮಾಹಿತಿ ಇದ್ದಲ್ಲಿ ಬಜಪೆ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.