-->
ರೈಲಿನಡಿಗೆ ಬಿದ್ದು ವ್ಯಕ್ತಿ ಸಾವು ,ಕಲ್ಲಾಪು ರೈಲ್ವೇ ಗೇಟ್ ಬಳಿ ಘಟನೆ

ರೈಲಿನಡಿಗೆ ಬಿದ್ದು ವ್ಯಕ್ತಿ ಸಾವು ,ಕಲ್ಲಾಪು ರೈಲ್ವೇ ಗೇಟ್ ಬಳಿ ಘಟನೆ

ಹಳೆಯಂಗಡಿ:ವ್ಯಕ್ತಿಯೊಬ್ಬರು ರೈಲಿನಡಿಗೆ ಬಿದ್ದು ಸಾವನ್ನಪ್ಪಿದ ಘಟನೆ  ಪಡುಪಣಂಬೂರು ಸಮೀಪದ ಕಲ್ಲಾಪು ರೈಲ್ವೇ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ  ಹಳೆಯಂಗಡಿ ಕೊಪ್ಪಳ ನಿವಾಸಿ ರಾಮ ಗುರಿಕಾರ (85)  ಸಾವನ್ನಪ್ಪಿದವರು. ಮೃತ ರಾಮ ಗುರಿಕಾರರವರು ಹಳೆಯಂಗಡಿ ಕೊಪ್ಪಳದಲ್ಲಿರುವ ತಮ್ಮ ಮನೆಯಿಂದ ಕಲ್ಲಾಪು ವಿನಲ್ಲಿರುವ ತಮ್ಮ ಮಗನ ಮನೆಗೆ ರೈಲು ಹಳಿಯಲ್ಲಿ ನಡೆದುಕೊಂಡು ಬರುತ್ತಿರುವಾಗ ಗುರುವಾರ ಸಂಜೆ 5:30 ಸುಮಾರಿಗೆ ರೈಲು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ರಾಮಗುರಿಕಾರರವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಅಪಘಾತ ನಡೆದ ಕೂಡಲೇ ರೈಲಿನ ಚಾಲಕ ಕಲ್ಲಾಪು ರೈಲ್ವೇ ಗೇಟ್ ಕೀಪರ್ ಗೆ ಮಾಹಿತಿ ನೀಡಿದ್ದು, ಬಳಿಕ ಮುಲ್ಕಿ ಪೊಲೀಸರಿಗೆ ದೂರು ನೀಡಲಾಗಿದೆ. ಮೃತ ರಾಮ ಗುರಿಕಾರ ಪಡುಪಣಂಬೂರು ಕಲ್ಲಾಪು ಶ್ರೀ ವೀರಭದ್ರ ದೇವಸ್ಥಾನದಲ್ಲಿ ಒಂದನೇ ಗುರಿಕಾರರಾಗಿ ಸೇವೆ ಸಲ್ಲಿಸುತ್ತಿದ್ದು, ಈ ಹಿಂದೆ ಹಳೆಯಂಗಡಿಯಲ್ಲಿ ನೇಕಾರ ವೃತ್ತಿ ನಡೆಸುತ್ತಿದ್ದರು.ಮೃತರು 4 ಪುತ್ರರು ಹಾಗೂ3 ಪುತ್ರಿಯರನ್ನು ಅಗಲಿದ್ದಾರೆ . ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ