ದ. ಕ ಜಿ.ಪಂ. ಹಿ. ಪ್ರಾ ಶಾಲೆ ಕರಂಬಾರು 79 ನೇ ಸ್ವಾತಂತ್ರೋತ್ಸವ
Saturday, August 16, 2025
ಬಜಪೆ:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು ಇಲ್ಲಿ 79 ನೇ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಈ ವೇಳೆ ದಿ. ರಾಮ ದೇವಾಡಿಗ ಅವರ ಸ್ಮರಣಾರ್ಥ ಕೊಡುಗೆಯಾಗಿ ನಿರ್ಮಿಸಲಾಗಿರುವ ಹೊಸ ಧ್ವಜಸ್ತಂಭವನ್ನು ಅವರ ಧರ್ಮಪತ್ನಿ ಸೀತಾ ದೇವಾಡಿಗ ಅವರು ಉದ್ಘಾಟಿಸಿದರು.
ಎಸ್ ಡಿ ಎಂ ಸಿ ಅಧ್ಯಕ್ಷ ಗುಣಪಾಲ್ ದೇವಾಡಿಗರ ಧ್ವಜಾರೋಹಣ ಗೈದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ, ಕೋರ್ದಬ್ಬು ದೈವಸ್ಥಾನ ಕರಂಬಾರು ನ ಅಧ್ಯಕ್ಷ ಜಗನಾಥ್ ಸಾಲ್ಯಾನ್, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮಣ್ ಬಂಗೇರ, ನಮ್ಮ ಕ್ಲಿನಿಕ್ ಮಳವೂರಿನ ವೈದ್ಯಾಧಿಕಾರಿ ಡಾ. ಸಮೀಕ್ಷಾ ಡಿ. ಪಿ , ನಮ್ಮ ಜವನೆರ್ ಕರಂಬಾರು ಅಧ್ಯಕ್ಷ ರಮೇಶ್ ಸುವರ್ಣ, ಶ್ರೀ ದೇವಿ ಸ್ಪೋರ್ಟ್ಸ್ & ಗೇಮ್ಸ್ ಕ್ಲಬ್ ಅಧ್ಯಕ್ಷ ರವಿ ಶೆಟ್ಟಿ, ಓಂಕಾರ್ ಫ್ರೆಂಡ್ಸ್ ಕ್ಲಬ್ ಕೆಂಜಾರು ಕರಂಬಾರು ಅಧ್ಯಕ್ಷ ಮನೋಜ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ರಾಕೇಶ್ ಕುಂದರ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಆಚಾರ್ಯ, ಕೋಶಾಧಿಕಾರಿ ವಿನೋದ್ ಅರ್ಬಿ, ಖಜಾಂಚಿ ಮಿಥುನ್ ಪೂಜಾರಿ, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷ ಲಾವಣ್ಯ, ಮಾಜಿ ಎಸ್ ಡಿ ಎಂ ಸಿ ಅಧ್ಯಕ್ಷ ರಾಘವೇಂದ್ರ ಮುಂತಾದವರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಉಷಾ ಕಿರಣ ಸ್ವಾಗತಿಸಿದರು.ಗೀತಾ ಟೀಚರ್ ನಿರೂಪಿಸಿ, ವಂದಿಸಿದರು.