Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಬಜಪೆ:ಸುಗಮ ಸಂಚಾರಕ್ಕಾಗಿ ತುರ್ತು ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು

ಬಜಪೆ:ಬಜಪೆ ಕೆಂಜಾರು ವಿಮಾನ ನಿಲ್ದಾಣ ಕ್ಕೆ ಸಂಪರ್ಕಿಸುವ ಮಳವೂರು ಸೇತುವೆ ಬಳಿ ನಿರಂತರ ವಾಹನ ಅಪಘಾತ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಸಂಚಾರಿ ಪೊಲೀಸ್ ಇಲಾಖೆ ಅಧಿಕಾರಿಗಳು,ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯ ಪ್ರಮುಖರೊಂದಿಗೆ  ಶಾಸಕ ಉಮಾನಾಥ್ ಕೋಟ್ಯಾನ್ ಅವರು ಸ್ಥಳದ ಪರಿವೀಕ್ಷಣೆ ಮತ್ತು ಸಮಾಲೋಚನೆ ನಡೆಸಿ ಸುಗಮ ಸಂಚಾರಕ್ಕಾಗಿ ತುರ್ತು ಕ್ರಮ ಕೈಗೊಳ್ಳುವ ಬಗ್ಗೆ ಸೂಚನೆಯನ್ನು ನೀಡಿದರು.