ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ 2024- 25 ನೇ ಸಾಲಿನ ಸಭೆ- ಶೇಕಡ 8% ಡಿವಿಡೆಂಟ್ ವಿತರಣೆ; ಸಾಧಕರಿಗೆ ಗೌರವ
Sunday, August 10, 2025
ಹಳೆಯಂಗಡಿ:ಸಂಘದ ಅಭಿವೃದ್ಧಿಯಲ್ಲಿ ಗ್ರಾಹಕರು, ಸದಸ್ಯರು ಹಾಗೂ ನಿರ್ದೇಶಕರ ಸಹಕಾರ ಕಾರಣವಾಗಿದ್ದು, ಲಾಭಾಂಶದಲ್ಲಿ ಶೇ. 8ರ ಡಿವಿಡೆಂಟ್ ವಿತರಿಸಲಾಗಿದೆ .ಮುಂದಿನ ದಿನಗಳಲ್ಲಿ ಶಾಖೆಯ ಅಭಿವೃದ್ಧಿಗೆ ಮತ್ತಷ್ಟು ಸಹಕಾರ ಅಗತ್ಯ ಎಂದು ಪ್ರಿಯದರ್ಶಿನಿ ಕೋ ಅಪರೇಟಿವ್ ಸೊಸೈಟಿ ಹಳೆಯಂಗಡಿಯ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಹೇಳಿದರು.ಅವರು ಹಳೆಯಂಗಡಿಯ ಹರಿ ಓಂ ಸಭಾಭವನದಲ್ಲಿ ಶನಿವಾರದಂದು ನಡೆದ ಹಳೆಯಂಗಡಿಯ ಪ್ರತಿಷ್ಠಿತ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ 2024 25 ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಈ ಸಂದರ್ಭ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಪಂಜ, ನಿರ್ದೇಶಕರಾದ ಡಾ. ಗಣೇಶ್ ಅಮೀನ್ ಸಂಕಮಾರ್, ಧನಂಜಯ ಮಟ್ಟು, ಗೌತಮ್ ಜೈನ್, ಶರತ್ ಶೆಟ್ಟಿ ಪಂಚವಟಿ, ಉಮಾನಾಥ್ ಜೆ ಶೆಟ್ಟಿಗಾರ್, ಜೈ ಕೃಷ್ಣ ಕೋಟ್ಯಾನ್, ಗಣೇಶ್ ಪ್ರಸಾದ್ ದೇವಾಡಿಗ, ಧನರಾಜ್ ಕೋಟ್ಯಾನ್, ಮಿರ್ಜಾ ಅಹ್ಮದ್, ಶೆರಿಲ್ ಆಯೋನ ಐಮನ್, ಹರೀಶ್ ಎನ್ ಪುತ್ರನ್, ನವೀನ್ ಸಾಲ್ಯಾನ್ ಪಂಜ, ಸಂದೀಪ್, ವಿಜಯಕುಮಾರ್ ಸನಿಲ್, ತನುಜಾ ಶೆಟ್ಟಿ ಉಪಸ್ಥಿತರಿದ್ದರು.
ಸಭೆಯಲ್ಲಿ 2024 25 ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ರಾಜ್ಯ ಹಿಂದುಳಿದ ಆಯೋಗದ ಸದಸ್ಯರಾಗಿ ನೇಮಕಗೊಂಡಿರುವ ಪ್ರತಿಭಾ ಕುಳಾಯಿ, ಅಂತರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್ ಶಿಪ್ ಪ್ರಶಸ್ತಿ ಪಡೆದ ಸುಷ್ಮಾ ತಾರಾನಾಥ್,ಗೌರವ ಡಾಕ್ಟರೇಟ್ ಪದವಿ ಪಡೆದ ಡಾ.ಶೃತಿ ರವರನ್ನು ಈ ವೇಳೆ ಗೌರವಿಸಲಾಯಿತು. ಸೊಸೈಟಿಯ ಸಾಧನೆಗೆ ಕಾರಣಕರ್ತರಾದ ಮಹಿಳಾ ಸ್ವಸಹಾಯ ಗುಂಪುಗಳನ್ನು ಅಭಿನಂದಿಸಲಾಯಿತು.
ಸಂಘದ ಸದಸ್ಯರಿಗೆ ಶೇಕಡ 8% ಡಿವಿಡೆಂಟ್ ವಿತರಿಸಲಾಯಿತು
ಕಿನ್ನಿಗೋಳಿ ಶಾಖಾ ಪ್ರಬಂಧಕರಾದ ಮೋಹನ್ ದಾಸ್ ಮತ್ತು ಹಳೆಯಂಗಡಿ ಶಾಖೆಯ ಪ್ರಜ್ಞಶ್ರೀ ರವರು ಪ್ರತಿಭಾನ್ವಿತ ವಿದ್ಯಾರ್ಥಿಗಳ ಗೌರವ ಸಲ್ಲಿಕೆ ಕಾರ್ಯಕ್ರಮ ಹಾಗೂ ಮೂಡಬಿದ್ರೆ
ಶಾಖಾ ಪ್ರಬಂಧಕರಾದ ಅಬಿಷ್ಟ ಜೈನ್ ಸಾಧನೆಗೈದ ಸದಸ್ಯರ ಅಭಿನಂದನಾ ಕಾರ್ಯಕ್ರಮ ನಡೆಸಿಕೊಟ್ಟರು.
ಪಡುಬಿದ್ರೆ ಶಾಖಾ ಪ್ರಬಂಧಕ ಅಂಜಲಿ ಉಳ್ಳಾಲ್ ಎಸ್ ರವರು ಉತ್ತಮ ಸ್ವಸಹಾಯ ಗುಂಪುಗಳ ಗೌರವ ಕಾರ್ಯಕ್ರಮ ನಡೆಸಿದರು.
ಸಾಲ ವಿಭಾಗದ ಪ್ರಬಂಧಕ ಅಕ್ಷತಾ ಶೆಟ್ಟಿ ಅವರು ಕಾರ್ಯಕ್ರಮ ನಿರೂಪಿಸಿ, ಲೆಕ್ಕಿಗರಾದ ಲೋಲಾಕ್ಷಿ ರವರು ಧನ್ಯವಾದ ಅರ್ಪಿಸಿದರು.