ಮುಲ್ಕಿ: ಶ್ರೀ ಕ್ಷೇತ್ರ ಬಪ್ಪನಾಡು ದೇವಸ್ಥಾನದ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ಮುಷ್ಟಿ ಕಾಣಿಕೆ ಸಮರ್ಪಣೆ
Monday, September 1, 2025
ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಅಧಿದೇವತೆ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಕಳೆದ ತಿಂಗಳ ಹಿಂದೆ ನಡೆದ ಅಷ್ಟಮಂಗಳ ಪ್ರಶ್ನಾ ಚಿಂತನೆಯ ಆಧಾರವಾಗಿ, ಕ್ಷೇತ್ರದ ಭವಿಷ್ಯದ ಧಾರ್ಮಿಕ ಹಾಗೂ ಸಾನಿಧ್ಯಪೂರಕ ಅಭಿವೃದ್ಧಿ ಕಾರ್ಯಕ್ರಮಗಳ ಪೂರಕವಾಗಿ ಶ್ರೀದೇವಿಗೆ ಅರ್ಪಿಸಲಿರುವ ನೂತನ ಬ್ರಹ್ಮರಥ ನಿರ್ಮಾಣ ಹಾಗೂ ಕ್ಷೇತ್ರಾಭಿವೃದ್ಧಿ ಕಾರ್ಯಗಳ ಪ್ರಾರಂಭಿಕ ಹಂತವಾಗಿ ಭಾನುವಾರ ಬೆಳಿಗ್ಗೆ 9 ಗಂಟೆಗೆ ಶ್ರೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ನಡೆದು ಮುಷ್ಟಿ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ನಡೆಯಿತು
ದಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಪವಿತ್ರಪಾಣಿ ಅತ್ತೂರು ಬೈಲು ವೆಂಕಟರಾಜ ಉಡುಪ,ತಂತ್ರಿಗಳಾದ ಬ್ರಹ್ಮಶ್ರೀಶಿಬರೂರು ಗೋಪಾಲಕೃಷ್ಣ ತಂತ್ರಿ,ಅರ್ಚಕರಾದ ನರಸಿಂಹ ಭಟ್,ಶ್ರೀಪತಿ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು
ಈ ಸಂದರ್ಭ ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು,ಮಾಜೀ ಮೊಕ್ತೇಸರ ಧರ್ಮದರ್ಶಿ ಡಾ ಹರಿಕೃಷ್ಣ ಪುನರೂರು, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ,ಅಪ್ಪು ಯಾನೆ ಶ್ರೀನಿವಾಸ ಪೂಜಾರಿ ಸಸಿಹಿತ್ಲು,ವಾಮನ್ ಇಡ್ಯಾ,
ಜೀರ್ಣೋದ್ಧಾರ ಸಮಿತಿಯ ಸುನಿಲ್ ಆಳ್ವ ,ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್,ಯದು ನಾರಾಯಣಶೆಟ್ಟಿ,
ಶರತ್ ನರ್ಸಪ್ಪ ಸಾಲ್ಯಾನ್, ರಾಮಚಂದ್ರ ನಾಯಕ್ ಕೊಲ್ನಾಡುಗುತ್ತು,
ಸುಕುಮಾರ್ ಶೆಟ್ಟಿ,ಅತುಲ್ ಕುಡ್ವ,ವಕೀಲರಾದ ಚಂದ್ರಶೇಖರ ಕಾಸಪ್ಪಯ್ಯನವರ ಮನೆ,ಡಾ. ಹರಿಶ್ಚಂದ್ರ ಪಿ ಸಾಲ್ಯಾನ್,ಕಿರಣ್ ಶೆಟ್ಟಿ ಕೋಲ್ನಾಡ್ ಗುತ್ತು,ಗುರುವಪ್ಪ ಕೋಟ್ಯಾನ್,ಸುಜಿತ್ ಸಾಲ್ಯಾನ್,
ಪದ್ಮನಾಭ ಪಂಬದ, ಸತೀಶ್ ಶೆಟ್ಟಿ ಪೇಟೆಮನೆ,ದಿನೇಶ್ ಹೆಗ್ಡೆ ಮಾನಂಪಾಡಿ,ಗೋಪಿನಾಥ ಪಡಂಗ,ಪುರಂದರ ಶೆಟ್ಟಿಗಾರ್,ವೆಂಕಟೇಶ್ ಹೆಬ್ಬಾರ್ ಕೊಡೆತ್ತೂರುಗುತ್ತಿನಾರ್ ನಿತಿನ್ ಶೆಟ್ಟಿ, ಶಶಿಂದ್ರ ಸಾಲ್ಯಾನ್, ಮುಲ್ಕಿ ನ. ಪಂ.ಅಧ್ಯಕ್ಷ ಸತೀಶ್ ಅಂಚನ್, ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್ ಕೊಳುವೈಲು, ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಪದ್ಮಶಾಲಿ ಸಭಾದ ಪುರಂದರ ಶೆಟ್ಟಿಗಾರ್, ಸತೀಶ್ ಭಂಡಾರಿ,ಗಂಗಾಧರ ಶೆಟ್ಟಿ ಬರ್ಕೆ ತೋಟ, ಸಾಯಿನಾಥ ಶೆಟ್ಟಿ ಮುಂಡ್ಕೂರು,ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ,ಹರಿದಾಸ ಭಟ್ ತೋಕೂರು,ಮುಲ್ಕಿ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ಬಿ ಎಸ್,
ಧನಂಜಯ ಮಟ್ಟು, ಮಹೀಮ್ ಹೆಗ್ಡೆ,ದಯಾನಂದ ಪೂಜಾರಿ ಮಟ್ಟು, ಮನೋಹರ ಕೋಟ್ಯಾನ್,ಶಿವಶಂಕರ್, ಕಿಶೋರ್ ಶೆಟ್ಟಿ ಬಪ್ಪನಾಡು, ನಾಗೇಶ್ ಬಪ್ಪನಾಡು ಮತ್ತಿತರರು ಉಪಸ್ಥಿತರಿದ್ದರು.
ಅಕ್ಟೋಬರ್ 10ರವರೆಗೆ ದೇವಸ್ಥಾನದಲ್ಲಿ ಶ್ರೀ ದೇವರಿಗೆ
ಮುಷ್ಟಿ ಕಾಣಿಕೆ ಸಲ್ಲಿಸಲು ಅವಕಾಶವಿದೆ ಎಂದು ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ