ದ. ಕ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿರುವ ಮನರೇಗಾ ಬಚಾವ್ ಸಂಗ್ರಾಮ ಪಾದಯಾತ್ರೆ ನಾಳೆ ಮೂಲ್ಕಿಯಲ್ಲಿ ಸಮಾಪ್ತಿ
Wednesday, February 11, 2026
ಮಂಗಳೂರು:ಮನರೇಗಾ ಯೋಜನೆ ಗ್ರಾಮೀಣ ಕಾರ್ಮಿಕರ ಜೀವನಾಡಿಯಾಗಿದ್ದು, ಲಕ್ಷಾಂತರ ಕುಟುಂಬಗಳ ಬದುಕಿಗೆ ಆಧಾರವಾಗಿದೆ. ಈ ಯೋಜನೆಯನ್ನು ದುರ್ಬಲಗೊಳಿಸುವ ಕೇಂದ್ರ ಬಿಜೆಪಿ ನೇತೃತ್ವದ NDA ಸರಕಾರದ ಧೋರಣೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿರುವ ಮನರೇಗಾ ಬಚಾವ್ ಸಂಗ್ರಾಮ ಪಾದಯಾತ್ರೆ ನಾಳೆ (ದಿನಾಂಕ:12-02-2026) ಗುರುವಾರದಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ತಲುಪಲಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಬೆಳಿಗ್ಗೆ 9ಕ್ಕೆ ಕೂಳೂರಿನಿಂದ ಪಾದಯಾತ್ರೆ ಆರಂಭಗೊಳ್ಳಲಿದ್ದು, ಸುರತ್ಕಲ್ ತಡಂಬೈಲ್ ನಲ್ಲಿ ಮಧ್ಯಾಹ್ನದ ಊಟ ಹಾಗೂ ವಿಶ್ರಾಂತಿ ನಂತರ ಸಂಜೆ ಮುಲ್ಕಿಯಲ್ಲಿ ಸಮಾಪ್ತಿಗೊಳ್ಳಲಿದೆ.